ಕನ್ಯತ್ವ ಸೀಲ್ಡ್‌ ಬಾಟಲ್‌ ಎಂದ ಪ್ರೊಫೆಸರ್ ಕತೆ ಏನಾಯ್ತು?

Published : Jan 16, 2019, 06:11 PM IST
ಕನ್ಯತ್ವ ಸೀಲ್ಡ್‌ ಬಾಟಲ್‌ ಎಂದ ಪ್ರೊಫೆಸರ್ ಕತೆ ಏನಾಯ್ತು?

ಸಾರಾಂಶ

ಹೆಣ್ಣು ಮಕ್ಕಳ ಕನ್ಯತ್ವವನ್ನು ಸೀಲ್ಡ್ ಬಾಟಲ್‌ ಎಂದು ಕರೆದು ವಿವಾದ ಹೊತ್ತಿಸಿದ್ದ ಪ್ರೊಫೆಸರ್ ಕನಕ್ ಸರ್ಕಾರ್‌ಗೆ ಗೇಟ್ ಪಾಸ್ ನೀಡಲಾಗಿದೆ.

ಕೋಲ್ಕತ್ತಾ [ ಜ. 16] ಯುವತಿಯರ ಕನ್ಯತ್ವದ ಬಗ್ಗೆ ಅಶ್ಲೀಲವಾಗಿ ಪಶ್ಚಿಮ ಬಂಗಾಳದ ಪ್ರೊಫೆಸರ್ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಬರೆದುಕೊಂಡು ನಂತರ ಡಿಲೀಟ್ ಮಾಡಿದ್ದರು.  ಜಾಧವ್‍ಪುರ ವಿಶ್ವವಿದ್ಯಾಲಯದ ಪ್ರೊಫೆಸರ್ ಕನಕ್ ಸರ್ಕಾರ್  ವಿರುದ್ಧ ಪ್ರತಿಭಟನೆಗಳು ನಡೆದಿದ್ದವು.

ನೀವು ಸೀಲ್ ಒಡೆದಿರುವ ತಂಪು ಪಾನೀಯ ಖರೀದಿ ಮಾಡುತ್ತೀರಾ? ಕನ್ಯತ್ವ ಸಹ ಹಾಗೆ ಎಂದು ಗಂಡುಮಕ್ಕಳ ಉದ್ದೇಶಿಸಿ ಬರೆದುಕೊಂಡಿದ್ದರು. ಇದೇ  ಕಾರಣ ಅವರನ್ನು ಕೆಲಸ ಕಳೆದುಕೊಳ್ಳುವಂತೆ ಮಾಡಿದೆ. 

ಕನ್ಯತ್ವ ಅನ್ನೋದು ಸೀಲ್ಡ್ ಬಾಟಲ್‌!

ಸೋಶಿಯಲ್ ಮೀಡಿಯಾದಲ್ಲಿ ಪ್ರೋಫೆಸರ್ ವಿರುದ್ಧ ನಿರಂತರವಾಗಿ ಪ್ರತಿಕ್ರಿಯೆಗಳು ಬರುತ್ತಲೇ ಇದ್ದವು. ಇದೆಲ್ಲವನ್ನು ಗಮನಿಸಿದ ವಿಶ್ವವಿದ್ಯಾನಿಲಯದ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಓಂಪ್ರಕಾಶ್ ಮೀಶ್ರಾ ವಿವಾದಿತ ಕಮೆಂಟ್ ಹಾಕಿದ್ದ ಪ್ರೊಫೆಸರ್‌ಗೆ ಗೇಟ್ ಪಾಸ್ ನೀಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!