ತೆಲಂಗಾಣ: ಬಸ್ ಕಂದಕಕ್ಕೆ ಉರುಳಿ 54 ಭಕ್ತರ ಸಾವು

Published : Sep 11, 2018, 04:13 PM ISTUpdated : Sep 19, 2018, 09:22 AM IST
ತೆಲಂಗಾಣ:  ಬಸ್ ಕಂದಕಕ್ಕೆ ಉರುಳಿ 54 ಭಕ್ತರ ಸಾವು

ಸಾರಾಂಶ

ಬಸ್ಸಿನಲ್ಲಿ ಒಟ್ಟು 62 ಮಂದಿ ಪ್ರಯಾಣಿಸುತ್ತಿದ್ದು ಅರಣ್ಯ ಪ್ರದೇಶದ ತಿರುವಿನಲ್ಲಿ ಚಲಿಸುವಾಗ ಅಪಘಾತವುಂಟಾಗಿದೆ. ಅಗ್ನಿ ಶಾಮಕದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹೈದರಾಬಾದ್[ಸೆ.11]: ತೆಲಂಗಾಣ ಸಾರಿಗೆ ಸಂಸ್ಥೆ ಬಸ್  ಕಂದಕಕ್ಕೆ ಉರುಳಿ 54 ಭಕ್ತರು ಮೃತಪಟ್ಟು ಹತ್ತಾರು ಮಂದಿ ಗಾಯಗೊಂಡ ಘಟನೆ ಜಗ್ತಿಯಾಳ್ ಜಿಲ್ಲೆಯ ಕೋಂಡಾಗಟ್ಟು ಬಳಿ ನಡೆದಿದೆ.

ಬಸ್ಸಿನಲ್ಲಿ ಒಟ್ಟು 62 ಮಂದಿ ಪ್ರಯಾಣಿಸುತ್ತಿದ್ದು ಅರಣ್ಯ ಪ್ರದೇಶದ ತಿರುವಿನಲ್ಲಿ ಚಲಿಸುವಾಗ ಅಪಘಾತವುಂಟಾಗಿದೆ. ಅಗ್ನಿ ಶಾಮಕದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಸಂಬಂಧಿಕರಿಗೆ 5 ಲಕ್ಷ ರೂ. ಪರಿಹಾರವನ್ನು ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಘೋಷಿಸಿದ್ದಾರೆ. ಮೃತರೆಲ್ಲರೂ ಕೋಂಡಾಗಟ್ಟು ಬೆಟ್ಟದಲ್ಲಿರುವ ಆಂಜನೇಯ ಸ್ವಾಮಿ ದೇಗುಲಕ್ಕೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು