ಕೊಪ್ಪಳ, ವಿಜಯಪುರದ ಕೆಲವು ಗ್ರಾಮಗಳಿಗೆ ಪ್ರವಾಹ ನುಗ್ಗಿ ಸಂಪೂರ್ಣ ಜಲಾವೃತ

Published : Jul 08, 2017, 08:54 PM ISTUpdated : Apr 11, 2018, 01:11 PM IST
ಕೊಪ್ಪಳ, ವಿಜಯಪುರದ ಕೆಲವು ಗ್ರಾಮಗಳಿಗೆ ಪ್ರವಾಹ ನುಗ್ಗಿ ಸಂಪೂರ್ಣ ಜಲಾವೃತ

ಸಾರಾಂಶ

ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಪ್ಪಳ ಮತ್ತು ವಿಜಯಪುರ  ಜಿಲ್ಲೆಯ ಕೆಲವು ಗ್ರಾಮಗಳಿಗೆ ಪ್ರವಾಹದ ನೀರು ನುಗ್ಗಿ ಸಂಪೂರ್ಣ ಜಲಾವೃತವಾಗಿದೆ.

ಕೊಪ್ಪಳ (ಜು.08): ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಪ್ಪಳ ಮತ್ತು ವಿಜಯಪುರ  ಜಿಲ್ಲೆಯ ಕೆಲವು ಗ್ರಾಮಗಳಿಗೆ ಪ್ರವಾಹದ ನೀರು ನುಗ್ಗಿ ಸಂಪೂರ್ಣ ಜಲಾವೃತವಾಗಿದೆ.

ವಿಜಯಪುರದಲ್ಲಿ ಸಾಯಬಣ್ಣ ನಾಯಕೋಡಿ (65) ಎನ್ನುವ ರೈತನೊಬ್ಬ ಕೊಚ್ಚಿಕೊಂಡು ಹೋಗಿದ್ದು ಇಂದು ಮೃತದೇಹ ಸಿಕ್ಕಿದೆ. ಕೊಪ್ಪಳ ಜಿಲ್ಲೆಯ ಒಬಲಬಂದಿ ಎನ್ನುವ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ 3 ಮಹಿಳೆಯರಿಗೆ ಸಿಡಿಲು ಬಡಿದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆಯಿಂದ ಭಾರೀ ಮಳೆ ಸುರಿಯುತ್ತಿದ್ದು ಕೊಪ್ಪಳದ ಬಿಕನಳ್ಳಿ, ಬಿಸರಳ್ಳಿ ಮತ್ತು ಹಿರೆಸಿಂಧೋಗಿ ಊರುಗಳು ಜಲಾವೃತಗೊಂಡಿದೆ. ಅರ್ಧ ಬೀಸರಹಳ್ಳಿ ಮುಳುಗಿ ಹೋಗಿದ್ದು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಸಿರಗುಪ್ಪ, ಬಳ್ಳಾರಿಯಲ್ಲೂ ಕೂಡಾ  ಭಾರೀ ಮಳೆ ಸುರಿದಿದೆ.  ಉಡುಪಿಯಲ್ಲಿ ಗಾಳಿ ಸಮೇತ ಜೋರು ಮಳೆ ಸುರಿದಿದ್ದು ಉದ್ಯಾವರದಲ್ಲಿ ಮನೆಯ ಗೋಡೆಯೊಂದು ಕುಸಿದಿದೆ.  

ಉತ್ತರ ಕನ್ನಡ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಕ್ಕಮಟ್ಟಿಗೆ ಮಳೆಯಾಗಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕದ ನೆಲದಲ್ಲಿ ಕೋಟಿ ಕೋಟಿ ಸಂಪತ್ತು? ಯಾವ ಜಿಲ್ಲೆಗಳಲ್ಲಿದೆ ಚಿನ್ನ, ವಜ್ರದ ನಿಕ್ಷೇಪ?
'ನೀವು ಎಂಎಲ್ಸಿ ಅನ್ನೋಕೆ ಸಾಕ್ಷಿ ಏನು?' Keshav Prasad ಕಾರು ತಡೆದ ಟೋಲ್ ಸಿಬ್ಬಂದಿ, ಒಂದು ಗಂಟೆ ಕಾಲ ಕಿರಿಕ್!