
ಕೊಪ್ಪಳ[ಮಾ. 07] ಶಾಸಕ ರಾಘವೇಂದ್ರ ಹಿಟ್ನಾಳ್ ವಿರುದ್ಧ ಸಂಸದ ಕರಡಿ ಸಂಗಣ್ಣ ದೂರು ದಾಖಲಿಸಿದ್ದಾರೆ. ಹುಬ್ಬಳ್ಳಿ ರೈಲ್ವೇ ಇಲಾಖೆಯ ಡಿವೈಎಸ್ಪಿಗೆ ಸಂಗಣ್ಣ ದೂರು ನೀಡಿದ್ದಾರೆ.
ರೈಲ್ವೇ ಮೇಲ್ಸೆತುವೆ ಉದ್ಘಾಟನೆ ಕಾರ್ಯಕ್ರಮ ಉದ್ಘಾಟನೆ ವೇಳೆ ನಡೆದಿದ್ದ ಗಲಾಟೆಯ ಸಂಬಂಧ ದೂರು ದಾಖಲಿಸಿದ್ದಾರೆ. ಇದೇ ತಿಂಗಳು 2 ರಂದು ಭಾಗ್ಯನಗರ ಮೆಲ್ಸೇತುವೆ ಉದ್ಘಾಟನೆ ಕಾರ್ಯಕ್ರಮ ಇತ್ತು. ಈ ವೇಳೆ ಕಾರ್ಯಕ್ರಮದ ವೇದಿಕೆ ಬಳಿ ಬಿಜೆಪಿ ಧ್ವಜ ಕಟ್ಟಿದ ವಾಹನಗಳಿದ್ದವು. ಇದೇ ಕಾರಣಕ್ಕೆ ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಆತನ ಬೆಂಬಲಿಗರು ಸಂಸದ ಕರಡಿ ಸಂಗಣ್ಣ ಜೊತೆ ಮಾತಿನ ಚಕಮಕಿ ನಡೆಸಿದ್ದರು.
ಕೊಪ್ಪಳ ಟಿಕೆಟ್ ಅಂತಿಮ ಮುದ್ರೆ ಸಿದ್ದು ಕೈನಲ್ಲಿ
ಜೊತೆಗೆ ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದಿದ್ದರು. ಈ ವೇಳೆಯಲ್ಲಿ ಕೆಲವರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದರು. ಈ ಹಿನ್ನಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್, ಬೆಂಬಲಿಗರಾದ ಕೃಷ್ಣ ಇಟ್ಟಂಗಿ,ಚನ್ನಪ್ಪ ತಟ್ಟಿ,ವೀರುಪಣ್ಣ ಕುಣಕೇರಿ,ರಮೇಶ್ ಹ್ಯಾಟಿ ವಿರುದ್ಧ ದೂರು ನೀಡಲಾಗಿದೆ. ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಆತನ ಬೆಂಬಲಿಗರ ವಿರುದ್ಧ ಕ್ರಮಕ್ಕೆ ಸಂಸದ ಕರಡಿ ಸಂಗಣ್ಣ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.