
ಕೆಜಿಎಫ್: ಕಮ್ಮಸಂದ್ರದ ಕೋಟಿಲಿಂಗೇಶ್ವರ ದೇವಾಲಯದ ಸ್ಥಾಪಕ ಸಾಂಬಶಿವಸ್ವಾಮಿ (72) ಶುಕ್ರವಾರ ನಿಧನರಾಗಿದ್ದಾರೆ. ಗುರುವಾರ ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಬೆಂಗಳೂರಿನ ಮಹಾವೀರ್ ಜೈನ್ ಆಸ್ಪತ್ರೆಗೆ ಸೇರಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಂಜೆ 4.15 ಸುಮಾರಿಗೆ ಮೃತಪಟ್ಟಿದ್ದಾರೆ. ಗೋಪಾಲಪ್ಪ ಎಂಬ ನಾಮಧೇಯದಿಂದ ಬೆಮಲ್ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸ್ವಾಮೀಜಿ, ನಂತರ ಬೆಂಗಳೂರಿನಲ್ಲಿ ವಸತಿ ಶಾಲೆಯನ್ನು ಪ್ರಾರಂಭಿಸಿದರು.
ಮದರ್ ತೆರೇಸಾ ಹೆಸರಿನಲ್ಲಿ ವಿದ್ಯಾಸಂಸ್ಥೆ ಕಟ್ಟಿದರು. 1979ರ ಸುಮಾರಿನಲ್ಲಿ ಕಮ್ಮಸಂದ್ರದ ತಮ್ಮ ಸ್ವಂತ ಜಮೀನಿನಲ್ಲಿ ದೇವಾಲಯ ನಿರ್ಮಾಣ ಮಾಡುವ ಸಂಕಲ್ಪ ಹೊಂದಿ ಕೋಟಿಲಿಂಗೇಶ್ವರ ದೇವಾಲಯಕ್ಕೆ ಅಡಿಪಾಯ ಹಾಕಿದರು.
ನಂತರ ದೇವಾಲಯದ ಸಮುಚ್ಚಯದಲ್ಲಿ ಒಂದೊಂದೇ ದೇವಾಲಯಗಳು ಪ್ರಾರಂಭವಾದವು. ದೇವಾಲಯದ ವಿಸ್ತೀರ್ಣ ಹೆಚ್ಚಾಯಿತು. ಸ್ವಾಮೀಜಿಯವರ ಆಸೆಯಂತೆ 108 ಅಡಿಗಳ ಬೃಹತ್ ಲಿಂಗವನ್ನು ಪ್ರತಿಷ್ಠಾಪನೆ ಮಾಡಲಾಯಿತು. ನಂತರ 60 ಅಡಿ ಲಿಂಗ ಬೃಹತ್ ನಂದಿ ಸೇರಿದಂತೆ ಸಹಸ್ರಾರು ಲಿಂಗಗಳ ಪ್ರತಿಷ್ಠಾಪನೆ ಮಾಡಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.