
ಬೆಂಗಳೂರು[ಆ.27] ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಗೆ ಬಿಗ್ ಶಾಕ್ ಕಾರ್ಯಕರ್ತರು ಕೊಟ್ಟ ಮಾಹಿತಿಗೆ ಸ್ವತಃ ಕೆಪಿಸಿಸಿ ಅಧ್ಯಕ್ಷರು ಬೆಚ್ಚಿ ಬಿದ್ದಿದ್ದಾರೆ. ಶಾಕಿಂಗ್ ಮಾಹಿತಿಯನ್ನು ದಿನೇಶ್
ಶೀಘ್ರವೇ ಹೈಕಮಾಂಡ್ ಗೆ ರವಾನೆ ಮಾಡಲಿದ್ದಾರೆ.
ಸಮ್ಮಿಶ್ರ ಸರ್ಕಾರದಲ್ಲಿಷ್ಟು ದಿನ ಕೆಳಹಂತದಲ್ಲಿ ಪಕ್ಷಕ್ಕೆ ಮಾರಕವಾಗಲಿದೆ. ವಿಧಾನಸೌಧದಲ್ಲಿ ಮಾಡಿಕೊಂಡ ಮೈತ್ರಿಗೆ ತಳಮಟ್ಟದಲ್ಲಿ ಬೆಂಬಲವಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಎರಡನೇ ದರ್ಜೆ ಕಾರ್ಯಕರ್ತರಾಗಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವಾಗದಿದ್ದರೆ ಪಕ್ಷಕ್ಕೆ ಮಾರಕ. ಜೆಡಿಎಸ್ ಕಾರ್ಯಕರ್ತರ ಅಬ್ಬರದಿಂದ ಕೈ ಕಾರ್ಯಕರ್ತರು ಸೊರಗಿದ್ದಾರೆ ಎಂಬ ಅಂಶಗಳು ದಿನೇಶ್ ಗೆ ಗೊತ್ತಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಹೋದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕಷ್ಟ. ರಾಜಕೀಯವಾಗಿ ಪಕ್ಷದ ಕಾರ್ಯಕರ್ತರಿಗೆ ಸರ್ಕಾರದ ಬಗ್ಗೆ ಉತ್ತಮ ಅಭಿಪ್ರಾಯವಿಲ್ಲ.
ಎಲ್ಲವನ್ನೂ ಅನುಸರಿಸಿಕೊಂಡು ಹೋಗಿ ಅನ್ನೋ ಹೈಕಮಾಂಡ್ ಸೂಚನೆ ಸರಿಯಿಲ್ಲ.
ಸ್ಥಳೀಯವಾಗಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ರಾಜ್ಯ ನಾಯಕರು ಗೌರವಿಸಬೇಕು ಎಂಬ ಮನವಿಯೂ ದಿನೇಶ್ ಗೆ ತಲುಪಿದೆ.
ಇತ್ತೀಚೆಗೆ ಬೆಳಗಾವಿ, ಬೀದರ್, ಬಿಜಾಪುರ, ಮೈಸೂರು, ಹಾಸನ, ಮಂಡ್ಯ ಪ್ರವಾಸ ಮಾಡಿದ್ದ ಗುಂಡುರಾವ್ಗೆ ಈ ಆತಂಕಕಾರಿ ಮಾಹಿತಿ ಸಿಕ್ಕಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗೋ ಅತಂಕವೂ ಇದರಿಂದ ಉಂಟಾಗಿದೆ.
ಈಗಾಗಲೇ ಕಾರ್ಯಕರ್ತರ ಮನದಾಳವನ್ನು ರಾಜ್ಯ ಉಸ್ತುವಾರಿ ವೇಣುಗೋಪಾಲ್ ಗೆ ತಲುಪಿಸಿದ ದಿನೇಶ್ ಗುಂಡೂರಾವ್ ಮುಂದೆ ಏನೇನು ಕ್ರಮ ತೆಗೆದುಕೊಳ್ಳಬಹುದು ಎಂಬುದನ್ನು ಚರ್ಚೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.