
ಬೆಂಗಳೂರು (ನ.21): ಖಾಸಗಿ ಆಸ್ಪತ್ರೆ ನಿಯಂತ್ರಣ ತಿದ್ದುಪಡಿ ವಿಧೇಯಕ ಇಂದು ಮಂಡನೆಯಾಗಲಿದೆ. ಆರೋಗ್ಯ ಸಚಿವ ರಮೇಶ್ ಕುಮಾರ್ರಿಂದ ಐತಿಹಾಸಿಕ ವರದಿ ಮಂಡನೆಯಾಗಲಿದೆ.
ಭಾರೀ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದ, ಪ್ರತಿಭಟನೆಗೆ ಕಾರಣವಾಗಿದ್ದ ಖಾಸಗಿ ವೈದ್ಯಕೀಯ ನಿಯಂತ್ರಣ ತಿದ್ದುಪಡಿ ವಿಧೇಯಕದಲ್ಲಿ ಏನಿದೆ? ಸುವರ್ಣನ್ಯೂಸ್ ಬಳಿ ಇದೆ ಕರಡು ಮಸೂದೆಯ ಅಂಶಗಳು
ಮಸೂದೆಯಲ್ಲಿ ಖಾಸಗಿ ವೈದ್ಯರನ್ನು ಜೈಲಿಗೆ ಅಟ್ಟುವ ಅಂಶಗಳೇ ಇಲ್ಲ
ರೋಗಿಗೆ ಚಿಕಿತ್ಸೆ ನೀಡುವುದರಲ್ಲಿ ಎಡವಟ್ಟಾದರೆ ವೈದ್ಯರಿಗೆ ಜೈಲು ಶಿಕ್ಷೆ ಇಲ್ಲ
ವೈದ್ಯರಿಗೆ ಜೈಲು ಶಿಕ್ಷೆ ನೀಡುವ ಪ್ರಸ್ತಾಪ ಕೈಬಿಟ್ಟ ಸರ್ಕಾರ
ನ.7ಕ್ಕೆ ಸಿದ್ಧಪಡಿಸಲಾದ ಕರಡು ಮಸೂದೆಯಲ್ಲಿ ಜೈಲು ಶಿಕ್ಷೆಯ ಅಂಶಗಳೇ ಇಲ್ಲ
ತಪ್ಪು ಚಿಕಿತ್ಸೆ ನೀಡಿದ ವೈದ್ಯರ ಬಗ್ಗೆ ವಿಚಾರಣೆ ನಡೆಸಲಿದೆ ದೂರು ನಿವಾರಣಾ ಸಮಿತಿ
ದೂರು ನಿವಾರಣಾ ಸಮಿತಿಗೆ ವೈದ್ಯರನ್ನು ಶಿಕ್ಷೆ ವಿಧಿಸುವ ಅಧಿಕಾರವಿಲ್ಲ
ಖಾಸಗಿ ಆಸ್ಪತ್ರೆಗಳಿಗೆ ಏಕನೀತಿಯ ದರ ರೂಪಿಸಬೇಕೆಂಬ ಅಂಶ ಕಾಯ್ದೆಯಲ್ಲಿಲ್ಲ
ಆಸ್ಪತ್ರೆ ಇರುವ ಸ್ಥಳ, ನೀಡುವ ಸೌಲಭ್ಯ ಆಧರಿಸಿ, ವೈದ್ಯರ ಅಭಿಪ್ರಾಯ ಪಡೆದು ಬೆಲೆ ನಿಗದಿ
ದೂರು ನಿವಾರಣಾ ಸಮಿತಿಯಲ್ಲಿ ವೈದ್ಯರಿಗೆ ಅವಕಾಶವಿಲ್ಲ ಎಂಬುದು ತಪ್ಪು ಗ್ರಹಿಕೆ
ಜಿಲ್ಲಾ ವೈದ್ಯಾಧಿಕಾರಿ, ಒಬ್ಬ ಖಾಸಗಿ ಆಸ್ಪತ್ರೆಯ ವೈದ್ಯರು ಸಮಿತಿಯ ಸದಸ್ಯ
ಖಾಸಗಿ ವೈದ್ಯರು, ರೋಗಿಗಳು ಇಬ್ಬರೂ ಕೂಡಾ ವಕೀಲರನ್ನು ಇಟ್ಟುಕೊಳ್ಳುವಂತಿಲ್ಲ
ಇಬ್ಬರೂ ನೇರವಾಗಿ ತಮ್ಮ ಅಳಲನ್ನು ಸಮಿತಿ ಮುಂದೆ ತೋಡಿಕೊಳ್ಳಬಹುದು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.