
ದಾವಣಗೆರೆ[ಜೂ.14]: ಕೆಪಿಎಸ್ಸಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಕೆಎಎಸ್ ಅಧಿಕಾರಿಯೊಬ್ಬರನ್ನು ದಾವಣಗೆರೆ ಡಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಇಲಾಖೆಯ ಉಪ ಕಾರ್ಯದರ್ಶಿ ರಾಮಚಂದ್ರಯ್ಯ ಬಂಧಿತ ಅಧಿಕಾರಿ. ಅಕ್ಟೋಬರ್ 16, 2017ರಂದು ದಾವಣಗೆರೆ ನೂತನ್ ಪರೀಕ್ಷಾ ಕೇಂದ್ರದಲ್ಲಿ ಮೈಕ್ರೋ ಪೋನ್ ಬಳಿಸಿ ಸಾಮೂಹಿಕ ನಕಲು ಪ್ರಕರಣ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ರಾಮಚಂದ್ರಯ್ಯ ಕಿಂಗ್ ಪಿನ್ ಆಗಿದ್ದರು.
ಈ ಬಗ್ಗೆ ನಗರದ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.