132 ತಾಲೂಕುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನ: ಸಚಿವ ಕೃಷ್ಣಬೈರೇಗೌಡ

Published : Mar 24, 2017, 02:22 PM ISTUpdated : Apr 11, 2018, 12:39 PM IST
132 ತಾಲೂಕುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನ: ಸಚಿವ ಕೃಷ್ಣಬೈರೇಗೌಡ

ಸಾರಾಂಶ

ಕೃಷಿ ಹೊಂಡದ ಚಟುವಟಿಕೆ ಸೇರಿದಂತೆ ಜಲಾನಯನ ಕಾಮಗಾರಿಗಳ ಅನುಷ್ಠಾನದ ಕುರಿತು ಅರಿವು ಮೂಡಿಸಲು ಇಲಾಖೆ ವತಿಯಿಂದ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಬೀದಿನಾಟಕ, ಜಾಥ, ಗೋಡೆ ಬರಹ ಮತ್ತು ಗ್ರಾಮ ಸಭೆಗಳನ್ನು ಆಯೋಜಿಸುವುದರ ಮೂಲಕ ಅರಿವನ್ನು ಮೂಡಿಸಲಾತ್ತಿದೆ ಎಂದು ಕೃಷ್ಣಬೈರೇಗೌಡ ಹೇಳಿದ್ದಾರೆ.

ಬೆಂಗಳೂರು (ಮಾ.24): ಕೃಷಿ ಭಾಗ್ಯ ಯೋಜನೆಯನ್ನು ರಾಜ್ಯದ 25 ಜಿಲ್ಲೆಗಳ 132 ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಅವರು ಇಂದು ಸದನಕ್ಕೆ ತಿಳಿಸಿದ್ದಾರೆ.

ಕೃಷಿ ಹೊಂಡದ ಚಟುವಟಿಕೆ ಸೇರಿದಂತೆ ಜಲಾನಯನ ಕಾಮಗಾರಿಗಳ ಅನುಷ್ಠಾನದ ಕುರಿತು ಅರಿವು ಮೂಡಿಸಲು ಇಲಾಖೆ ವತಿಯಿಂದ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಬೀದಿನಾಟಕ, ಜಾಥ, ಗೋಡೆ ಬರಹ ಮತ್ತು ಗ್ರಾಮ ಸಭೆಗಳನ್ನು ಆಯೋಜಿಸುವುದರ ಮೂಲಕ ಅರಿವನ್ನು ಮೂಡಿಸಲಾತ್ತಿದೆ ಎಂದು ಕೃಷ್ಣಬೈರೇಗೌಡ ಹೇಳಿದ್ದಾರೆ.

ರಾಜ್ಯದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು 2014-15 ನೇ ಸಾಲಿನಿಂದ ಜಾರಿಗೊಳಿಸಲಾಗಿದೆ.

ಸಾವಯವ ಭಾಗ್ಯ ಯೋಜನೆ

ರಾಜ್ಯದಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಸಾವಯವ ಭಾಗ್ಯ ಯೋಜನೆ' ಯನ್ನು 2013-14 ನೇ ಸಾಲಿನಿಂದ ಹಾಗೂ ಕೇಂದ್ರ ಪುರಸ್ಕೃತ 'ಪರಂಪರಾಗತ ಕೃಷಿ ವಿಕಾಸ' ಯೋಜನೆಯನ್ನು 2015-16 ನೇ ಸಾಲಿನಿಂದ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Swiggy Report 2025: ಸೆಕೆಂಡಿಗೆ 3ರಂತೆ, 93 ಮಿಲಿಯನ್ ಬಿರಿಯಾನಿ ಆರ್ಡರ್‌ ಬಂದಿವೆ! ಬೆಚ್ಚಿಬೀಳಿಸುತ್ತೆ ವರದಿ!
ಪ್ರಿಯಾಂಕಾ ಗಾಂಧಿ ಪ್ರತಿದಿನ 'ನೀಲಿ ಅರಿಶಿನ' ಸೇವಿಸುತ್ತಾರೆ, ಇಲ್ಲಿದೆ ಇದರ ಅದ್ಭುತ ಪ್ರಯೋಜನಗಳ ಲಿಸ್ಟ್!