ಎಸ್.ಎಂ. ಕೃಷ್ಣ ಬಿಜೆಪಿ ಸೇರ್ಪಡೆ ಮುಂದೂಡಿಕೆ

By Suvarna Web DeskFirst Published Mar 15, 2017, 2:03 AM IST
Highlights

ನಿನ್ನೆ ಬೆಂಗಳೂರಿನಿಂದ ನವದೆಹಲಿಗೆ ತೆರಳಿದ್ದ ಕೃಷ್ಣ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿ ಕಮಲ ಪಕ್ಷಕ್ಕೆ ಸೇರ್ಪಡೆಯಾಗಬೇಕಿತ್ತು.

ಬೆಂಗಳೂರು(ಮಾ.15): ಸೋದರಿ ಸುನೀತಾ ನಿಧನದ ಹಿನ್ನಲೆಯಲ್ಲಿ  ಕಾಂಗ್ರೆಸ್ ಮಾಜಿ ಮುಖಂಡ ಎಸ್.ಎಂ.ಕೃಷ್ಣ ಅವರ ಸೇರ್ಪಡೆ ದಿನಾಂಕ ಮುಂದೂಡಿಕೆಯಾಗಿದೆ.

ನಿನ್ನೆ ಬೆಂಗಳೂರಿನಿಂದ ನವದೆಹಲಿಗೆ ತೆರಳಿದ್ದ ಕೃಷ್ಣ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿ ಕಮಲ ಪಕ್ಷಕ್ಕೆ ಸೇರ್ಪಡೆಯಾಗಬೇಕಿತ್ತು. ಸೋದರಿ ಅನಿತಾ ಮೃತಪಟ್ಟ ಹಿನ್ನೆಲೆಯಲ್ಲಿ ನವದೆಹಲಿಯಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಹೀಗಾಗಿ ಮಾಜಿ ಮುಖ್ಯಮಂತ್ರಿಯ ಬಿಜೆಪಿ ಸೇರ್ಪಡೆಯ ದಿನಾಂಕ ಮುಂದಕ್ಕೆ ಹೋಗಿದೆ.

click me!