ಬರಿದಾದ ಕೆಆರ್`ಎಸ್.. 47 ವರ್ಷಗಳ ಬಳಿಕ ಕಾಣುತ್ತಿದೆ ಕನ್ನಂಬಾಡಿ ಕಟ್ಟೆಯ ತಳ

Published : Sep 27, 2016, 11:58 AM ISTUpdated : Apr 11, 2018, 12:41 PM IST
ಬರಿದಾದ ಕೆಆರ್`ಎಸ್.. 47 ವರ್ಷಗಳ ಬಳಿಕ ಕಾಣುತ್ತಿದೆ ಕನ್ನಂಬಾಡಿ ಕಟ್ಟೆಯ ತಳ

ಸಾರಾಂಶ

ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಲು ಮುಂದಾದ ಸರಕಾರ ತಮಿಳುನಾಡಿಗೆ ನೀರು ಹರಿಸಿದ್ದರಿಂದ ಈ ಸ್ಥಿತಿ

ಮಂಡ್ಯ(ಸೆ.27): ನಾಡಿನ ಜೀವನಾಡಿ ಕಾವೇರಿ ನದಿಯ ಕೆಆರ್​ಎಸ್​ ಜಲಾಶಯ ಹಿಂದೆದೂ ಕಾಣದ ರೀತಿ ಬರಿದಾಗಿದೆ. 49.45 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ ಇರೋದು ಕೇವಲ 10.2 ಟಿಎಂಸಿ ನೀರು. ಕಳೆದ 47 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೆಆರ್​ಎಸ್​ನ ನೀರಿನ ಮಟ್ಟ ತಳಕಂಡಿದೆ.  1969ರಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದಾಗ ಹತ್ತು ಟಿಎಂಸಿಯಷ್ಟು ನೀರು ಇತ್ತು. ಈಗ ಇಂಥದ್ದೇ ಸ್ಥಿತಿ ಮರುಕಳಿಸಿದೆ.

ಸುಪ್ರೀಂ ಆದೇಶ ಪಾಲಿಸಿದ್ದಕ್ಕೆ ಈ ಸ್ಥಿತಿ: ಸುಪ್ರೀಂ ಕೋರ್ಟ್ ಆದೇಶ ಮತ್ತು ಕಾವೇರಿ ಉಸ್ತುವಾರಿ ಸಮಿತಿ ಆದೇಶ ಪಾಲನೆ ಮಾಡಲು ಮುಂದಾದ ಸರಕಾರ ತಮಿಳುನಾಡಿಗೆ ನೀರು ಹರಿಸಿದ್ದರಿಂದ ಈ ಸ್ಥಿತಿ ಬಂದಿದೆ. ಈಗ ಉಳಿದಿರುವ ನೀರನ್ನು ಮುಂದಿನ ವರ್ಷದ ಜೂನ್​ವರೆಗೆ ಕುಡಿಯುವ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಬೇಕಾಗಿದೆ. ಹಿಂಗಾರು ಮಳೆ ಕೈಕೊಟ್ಟರೆ ಕಾವೇರಿಯನ್ನೇ ಅವಲಂಭಿಸಿರುವ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಜಲಕ್ಷಾಮ ಎದುರಾಗಲಿದೆ. ಬೆಂಗಳೂರು, ಮೈಸೂರು ಮತ್ತಿತರ ನಗರಗಳಿಗೆ ಕುಡಿಯುವ ಉದ್ದೇಶಕ್ಕಾಗಿ ತಿಂಗಳಿಗೆ 2 ಟಿಎಂಸಿಯಷ್ಟು ನೀರು ಅಗತ್ಯವಿದೆ. ಸದ್ಯ ಜಲಾಶಯದ ಒಳಹರಿವು 1185 ಕ್ಯೂಸೆಕ್​ನಷ್ಟಿದ್ದು, ಹೊರ ಹರಿವು 200 ಕ್ಯೂಸೆಕ್​ನಷ್ಟಿದೆ.

KRSನಿಂದ ನೀರು ಬಿಡದಿದ್ದರೂ, ತಮಿಳುನಾಡಿಗೆ ಹರಿಯಿತು ನೀರು: ಎಸ್.. ಕೆಆರ್‌ಎಸ್ ನಿಂದ ನೀರು ಬಿಟ್ಟಿಲ್ಲ. ಆದ್ರೂ ತಮಿಳುನಾಡಿಗೆ ನೀರು ಹರಿದಿದೆ. ಕಳೆದ ಐದಾರು ದಿನಗಳಿಂದ ಕೆ.ಆರ್.ಎಸ್ ನಿಂದ ಬಿಳಿಗುಂಡ್ಲು ಮಧ್ಯೆ ಸುರಿದ ಮಳೆಯಿಂದಾಗಿ,ತಮಿಳುನಾಡಿಗೆ 14 ಸಾವಿರ ಕ್ಯೂಸೆಕ್ ನೀರು ಹರಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿತ್ರದುರ್ಗ ಬಸ್‌ ದುರಂತ: ಕವಿತಾಳ ಮದುವೆಯ ಬ್ಯಾಚುಲರ್ ಪಾರ್ಟಿಗೆ ಪ್ರವಾಸ ಹೊರಟಿದ್ದ ತಾಯಿ-ಮಗಳು ಮಿಸ್ಸಿಂಗ್, ಉಳಿದವರು ಸೇಫ್
ಕಾರವಾರದಲ್ಲಿ ಸಂಗೀತಪ್ರಿಯರನ್ನು ಹುಚ್ಚೆಬ್ಬಿಸಿದ ಸೋನು ನಿಗಮ್; ಕನ್ನಡಿಗರ ಕ್ಷಮೆ ಕೇಳಿ ಮನಗೆದ್ದ ಗಾಯಕ!