
ಮಂಡ್ಯ [ಆ.10]: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಅಣೆಕಟ್ಟೆ(ಕೆಆರ್ಎಸ್) ನೀರಿನ ಮಟ್ಟ100 ಅಡಿ ಗಡಿ ದಾಟಿದೆ. ಅಣೆಕಟ್ಟೆಯ ಒಟ್ಟು ಎತ್ತರ 124.80 ಅಡಿ ಇದ್ದು, ಭರ್ತಿಯಾಗಲು ಇನ್ನು 22.80 ಅಡಿ ಬಾಕಿ ಇದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕಳೆದ ನಾಲ್ಕೈದು ದಿನಗಳಿಂದ ಕೆಆರ್ಎಸ್ಗೆ ಒಳ ಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಲೇ ಇದೆ.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಶುಕ್ರವಾರ 73,284 ಸಾವಿರಕ್ಕೂ ಅಧಿಕ ಕ್ಯುಸೆಕ್ ಒಳ ಹರಿವು ಬಂದಿದ್ದು, ಒಂದೇ ದಿನ 9 ಅಡಿ ನೀರು ಏರಿಕೆಯಾಗಿದೆ. ಆ.8ರ ಸಂಜೆ ವೇಳೆಗೆ ಜಲಾಶಯದಲ್ಲಿ 93.50 ಅಡಿ ಇದ್ದ ನೀರು ಆ.9ರ ಸಂಜೆ ವೇಳೆಗೆ 102 ಅಡಿ ತಲುಪಿದೆ. ಮುಂದಿನ ಎಂಟತ್ತು ದಿನ ಇದೇ ಪ್ರಮಾಣದ ಒಳ ಹರಿವು ಹರಿದು ಬಂದರೆ ಜಲಾಶಯ ಭರ್ತಿಯಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.