
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಆರ್’ಎಸ್ ಜಲಾಶಯಕ್ಕೆ ಹರಿದು ಬರುತ್ತಿದ್ದ ನೀರಿನ ಒಳಹರಿವೂ ಕೂಡಾ ಹೆಚ್ಚಾಗಿದೆ.
ಅತ್ತ ಕೊಡಗು ಜಿಲ್ಲೆಯಾದ್ಯಾಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಇತ್ತ ಕೆಆರ್’ಎಸ್ ನೀರಿನ ಮಟ್ಟ ಹೆಚ್ಚಾಗಿದೆ. ಜಲಾಶಯದ ಮಟ್ಟ 124.80 ಅಡಿಯಾಗಿದ್ದು ನೀರಿನ ಮಟ್ಟ ಈಗಾಗಲೇ 90.80 ಅಡಿಯನ್ನು ಮುಟ್ಟಿದೆ.
ಗುರುವಾರ ಜಲಾಶಯಕ್ಕೆ ಒಳಹರಿವು ಪ್ರಮಾಣ 28383 ಕ್ಯುಸೆಕ್ ಇದ್ದರೆ, ಹೊರಹರಿವು 394 ಕ್ಯುಸೆಕ್ ಇದೆ. ಕಳೆದ ವರ್ಷ ಇದೇ ದಿನ ನೀರಿನ ಮಟ್ಟ 67.45 ಅಡಿಯಷ್ಟಿದ್ದರೆ, ಒಳ ಹರಿವು 601 ಕ್ಯುಸೆಕ್ ಆಗಿತ್ತು.
ಜೂನ್-ಜುಲೈಯಲ್ಲಿಯೂ ಈ ರೀತಿ ಮಳೆ ಸುರಿದರೆ ರಾಜ್ಯ ನೀರಿನ ಕೊರತೆ ಎದುರಿಸುವ ಸಾಧ್ಯತೆ ಕಡಿಮೆಯಾಗಲಿದೆ. ವಿಶೇಷವಾಗಿ, ಕೆಆರ್’ಎಸ್’ನಿಂದ ಕುಡಿಯುವ ನೀರು ಪಡೆಯುವ ಮೈಸೂರು, ಬೆಂಗಳೂರು ನಗರಗಳು ನೀರಿನ ಅಭಾವವನ್ನು ಎದುರಿಸಬೇಕಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.