
ಬಾಗಲಕೋಟೆ : ಬಾಗಲಕೋಟೆಯಲ್ಲಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸಿಎಂ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಈಶ್ವರಪ್ಪ, ನಾನು ಕುಮಾರಸ್ವಾಮಿ ಅವರನ್ನು ಟೀಕೆ ಮಾಡುವುದಕ್ಕೆ ಹೋಗುವುದಿಲ್ಲ. ಗ್ರಾಮ ವಾಸ್ತವ್ಯ ಎನ್ನುವುದು ಒಂದು ಒಳ್ಳೆಯ ಕಾರ್ಯಕ್ರಮ ಎಂದಿದ್ದಾರೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮೇಜು ಕುರ್ಚಿಗಳು ಸರಿಯಾಗಿಲ್ಲ. ಸರ್ಕಾರಿ ಶಾಲೆಗಳನ್ನು ಸುಧಾರಣೆ ಮಾಡಿದರೆ ಒಳಿತು. ಗ್ರಾಮ ವಾಸ್ತವ್ಯದಿಂದ ಸರ್ಕಾರಿ ಶಾಳೆಗಳ ಅಭಿವೃದ್ಧಿ ಆಗಲಿ. ಸರ್ಕಾರಿ ಶಾಲೆಗೆ ಬಡಮಕ್ಕಳು ಹೋಗುತ್ತಾರೆ ಎಂದು ಗ್ರಾಮ ವಾಸ್ತವ್ಯದ ಬಗ್ಗೆ ಉತ್ತಮ ಮಾತುಗಳನ್ನಾಡಿದ್ದಾರೆ.
ಅಲ್ಲದೇ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯದ ಬಳಿಕ ರಾಜ್ಯದ ಸರ್ಕಾರಿ ಶಾಲೆಗಳಿಗೆ ಹೊಸ ರೂಪವನ್ನು ನೀಡಲಿ ಎಂದು ಬಿಜೆಪಿ ನಾಯಕ ಈಶ್ವರಪ್ಪ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.