
ಬೆಂಗಳೂರು (ಮಾ.16): ವಿಧಾನ ಪರಿಷತ್ತಿನಲ್ಲೂ ಇಂದು ಕಾಂಗ್ರೆಸ್ ಡೈರಿ ವಿಷಯ ಪ್ರತಿಧ್ವನಿಸಿ ಕೋಲಾಹಲ ಎಬ್ಬಿಸಿತು.
ವಿಷಯ ಪ್ರಸ್ತಾಪಿಸಿದ ಪರಿಷತ್ತು ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ಡೈರಿ ಕುರಿತು ಚರ್ಚಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಎರಡೆರಡು ಬಾರಿ ಅವಕಾಶ ನೀಡಲು ನಿಯಮಾವಳಿಯಲ್ಲಿ ಅವಕಾಶವಿಲ್ಲ. ಹೀಗಾಗಿ ಕೊಡಬೇಡಿ ಎಂದು ಸಭಾಪತಿಗೆ ಆಗ್ರಹಿಸಿದರು.
ಈ ವೇಳೆ ಈಶ್ವರಪ್ಪ ಹಾಗೂ ಸಿಎಂ ನಡುವೆ ಮಾತಿನ ಚಕಮಕಿ ನಡೆಯಿತು. ಕಾಂಗ್ರೆಸ್ ಡೈರಿ ಹಾಗೂ ಲೇಹರ್ ಸಿಂಗ್'ಗೆ ಸೇರಿದೆ ಎನ್ನಲಾದ ಡೈರಿಗಳನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಈಶ್ವರಪ್ಪ ಒತ್ತಾಯಿಸಿದರು.
ಇದಕ್ಕೆ ಕೆಂಡಮಂಡಲರಾದ ಸಿಎಂ, ನಿಮಗೆ ಯಾವಾಗ ಸಿಬಿಐ ವ್ಯಾಮೋಹ ಬಂತು ಎಂದು ಕುಹಕವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.