ನಮ್ಮದು ‘ಆಪರೇಷನ್‌’ ಆದರೆ, ರಾಮನಗರದ್ದೇನು?

Published : Nov 03, 2018, 11:40 AM ISTUpdated : Nov 03, 2018, 12:39 PM IST
ನಮ್ಮದು ‘ಆಪರೇಷನ್‌’ ಆದರೆ, ರಾಮನಗರದ್ದೇನು?

ಸಾರಾಂಶ

ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ಕಣದಿಂದಲೇ ನಿವೃತ್ತರಾಗಿದ್ದು ಈ ಬಗ್ಗೆ ಬಿಜೆಪಿ ಮುಖಂಡ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. 

ಶಿವಮೊಗ್ಗ :  ಭಾರತೀಯ ಜನತಾ ಪಾರ್ಟಿಗೆ ಅನ್ಯ ಪಕ್ಷದಿಂದ ಒಬ್ಬ ಸೇರ್ಪಡೆಗೊಂಡರೆ ಅದನ್ನು ‘ಆಪರೇಷನ್‌ ಕಮಲ’ ಎಂದು ಬಿಂಬಿಸಲಾಗುತ್ತದೆ. ಅದೇ ರಾಮನಗರದಲ್ಲಿ ನಡೆದ ಕುತಂತ್ರದ ರಾಜಕಾರಣಕ್ಕೆ ಏನೆಂದು ಹೆಸರಿಸಬೇಕು ಬೇಕೆಂದು ಶಾಸಕ ಕೆ.ಎಸ್‌.ಈಶ್ವರಪ್ಪ ಕಿಡಿಕಾರಿದರು. 

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ವಿರುದ್ಧ ಬಿಜೆಪಿಯ ಚಂದ್ರಶೇಖರ್‌ ಒಳ್ಳೆಯ ಅಭ್ಯರ್ಥಿಯಾಗಲಿಲ್ಲ. ಕುತಂತ್ರ ರಾಜಕಾರಣ ಮಾಡಿ ಪಕ್ಷ ತೊರೆದಿದ್ದಾರೆ. ಇದು ನಮಗೆ ಪಾಠವಾಗಿದೆ ಎಂದರು.

ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಎಚ್ಚರ ವಹಿಸಬೇಕಿದೆ. ಈ ಘಟನೆ ಮುಂದೆ ಇಟ್ಟುಕೊಂಟ್ಟು ಮುಂದಿನ ದಿನಗಳಲ್ಲಿ ಟಿಕೆಟ್‌ ನೀಡಲಾಗುವುದು. ಕಾಂಗ್ರೆಸ್‌ ಪಕ್ಷವೇ ಅವರನ್ನು ಬಿಜೆಪಿಗೆ ಕಳುಹಿಸಿ ಪುನಃ ಅವರನ್ನು ವಾಪಸ್‌ ಕರೆಸಿಕೊಂಡಿದೆ. ಈ ರೀತಿ ಕುತಂತ್ರ ರಾಜಕಾರಣ ಯಾವುದೇ ಕಾರಣಕ್ಕೂ ಒಳ್ಳೆಯದಲ್ಲ ಎಂದು ಹೇಳಿದರು.

1989ರಲ್ಲಿ ನಾಲ್ವರು ಶಾಸಕರನ್ನು ಹೊಂದಿದ್ದ ಬಿಜೆಪಿ ಇಂದು 104 ಶಾಸಕರನ್ನು ಹೊಂದಿದೆ. ಬೇರೆ ಬೇರೆ ಪಕ್ಷಗಳಿಂದ ಬಂದ ಅನೇಕರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಹಾಗಾಗಿ ರಾಮನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಬಂದಿದ್ದ ಚಂದ್ರಶೇಖರ್‌ ಅವರಿಗೆ ಪಕ್ಷದಿಂದ ಟಿಕೆಟ್‌ ನೀಡಲಾಗಿತ್ತು. ಆದರೆ, ಅವರು ಡಿ.ಕೆ.ಸಹೋದರರ ಕುತಂತ್ರ ರಾಜಕಾರಣದಿಂದ ಕಾಂಗ್ರೆಸ್‌ಗೆ ಮರಳಿದ್ದಾರೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!