
ಬೆಂಗಳೂರು(ಮೇ.11): ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ಪಿ'ಆರ್'ಒ ವಿನಯ್' ಅವರನ್ನು ಅಪಹರಣಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆಯಲ್ಲಿ ನಡೆದಿದೆ.
ಇಂದು ಮಧ್ಯಾಹ್ನ 3 ಗಂಟೆಗೆ ಕಾರಿನಲ್ಲಿ ವಿನಯ್ ಅವರ ಮನೆಯ ಮುಂದೆ ಬಂದ ಐದಾರು ದುಷ್ಕರ್ಮಿಗಳು ವಿನಯ್ ಅವರನ್ನು ಎಳೆದು ಕಾರಿನಲ್ಲಿ ಕರೆದೊಯ್ಯಲು ಯತ್ನಿಸಿದ್ದಾರೆ. ವಿನಯ್ ಕಿರುಚಾಡಿದ ಕಾರಣ ತಕ್ಷಣ ಸ್ಥಳೀಯರು ಆಗಮಿಸಿದ್ದಾರೆ. ಸಾರ್ವಜನಿಕರನ್ನು ಕಂಡ ಅಪಹರಣಕಾರರು ಬಂದ ಕಾರಿನಲ್ಲಿಯೇ ಪರಾರಿಯಾಗಿದ್ದಾರೆ. ಎಳದಾಡಿದ ಸಂದರ್ಭದಲ್ಲಿ ವಿನಯ್ ಅವರ ಕೈ ಮೂಳೆ ಮುರಿದಿದ್ದು, ಯಶವಂತಪುರದ ಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಹಾಲಕ್ಷ್ಮಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.