ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಲ್ಲಿಗೂ ಇನ್ನು ಕೆಎಸ್ ಆರ್ ಟಿಸಿ ಬಸ್ ಸೇವೆ

Published : Sep 21, 2018, 07:53 AM IST
ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಲ್ಲಿಗೂ ಇನ್ನು ಕೆಎಸ್ ಆರ್ ಟಿಸಿ ಬಸ್ ಸೇವೆ

ಸಾರಾಂಶ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಸಾರ್ಟಿಸಿ) ಕೇಂದ್ರೀಯ ವಿಭಾಗದಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು- ತಂಜಾವೂರು ಮತ್ತು ಬೆಂಗಳೂರು- ಕೊಯಮತ್ತೂರು ಮಾರ್ಗದಲ್ಲಿಒಂದು ನಾನ್‌ ಎಸಿ ಸ್ಲೀಪರ್‌ ಬಸ್‌ ಸೇವೆ ಒದಗಿಸಲಿದೆ. 

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಸಾರ್ಟಿಸಿ) ಕೇಂದ್ರೀಯ ವಿಭಾಗದಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು- ತಂಜಾವೂರು ಮತ್ತು ಬೆಂಗಳೂರು- ಕೊಯಮತ್ತೂರು ಮಾರ್ಗದಲ್ಲಿ ಸೆ.24ರಿಂದ ತಲಾ ಒಂದು ನಾನ್‌ ಎಸಿ ಸ್ಲೀಪರ್‌ ಬಸ್‌ ಸೇವೆ ನೀಡಲಿದೆ.

ಬೆಂಗಳೂರು- ತಂಜಾವೂರು ಮಾರ್ಗದ ಬಸ್‌ ನಿತ್ಯ ರಾತ್ರಿ 9.30ಕ್ಕೆ ಹೊರಟು ಬೆಳಗ್ಗೆ 6.15ಕ್ಕೆ ತಂಜಾವೂರು ತಲುಪಲಿದೆ. ಅಲ್ಲಿಂದ ರಾತ್ರಿ 9ಕ್ಕೆ ಹೊರಟು ಮುಂಜಾನೆ 5.45ಕ್ಕೆ ಬೆಂಗಳೂರು ತಲುಪಲಿದೆ. ವಯಸ್ಕ ಪ್ರಯಾಣಿಕರಿಗೆ ಟಿಕೆಟ್‌ ದರ .625 ನಿಗದಿಗೊಳಿಸಲಾಗಿದೆ. 

ಬೆಂಗಳೂರು- ಕೊಯಮತ್ತೂರು ಮಾರ್ಗದ ಬಸ್‌ ನಿತ್ಯ ರಾತ್ರಿ 11ಕ್ಕೆ ಹೊರಟು ಬೆಳಗ್ಗೆ 6.30ಕ್ಕೆ ಕೊಯಮತ್ತೂರು ತಲುಪಲಿದೆ. ಅಲ್ಲಿಂದ ರಾತ್ರಿ 10.15ಕ್ಕೆ ಹೊರಟು ಬೆಳಗ್ಗೆ 6.30ಕ್ಕೆ ಬೆಂಗಳೂರು ತಲುಪಲಿದೆ. ವಯಸ್ಕರ ಪ್ರಯಾಣಕ್ಕೆ ಟಿಕೆಟ್‌ ದರ .580 ನಿಗದಿಗೊಳಿಸಲಾಗಿದೆ ಎಂದು ಕೆಎಸ್ಸಾರ್ಟಿಸಿ ಪ್ರಕಟಣೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

10 ದಿನ ನಡೆದ ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ತೆರೆ
ಗ್ಯಾರಂಟಿಯಿಂದಾಗಿ ತಲಾ ಆದಾಯದಲ್ಲಿ ರಾಜ್ಯ ನಂ.1 : ಸಿದ್ದರಾಮಯ್ಯ