ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್

Published : Sep 08, 2018, 09:12 AM ISTUpdated : Sep 09, 2018, 09:16 PM IST
ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್

ಸಾರಾಂಶ

ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್. ನೀವು ಹಬ್ಬಕ್ಕೆ ಊರಿಗೆ ತೆರಳುವವರು ಬಸ್ ಗಾಗಿ ಪರದಾಡಬೇಕಾದ ಅವಶ್ಯಕತೆ ಇಲ್ಲ. ಕೆಎಸ್ ಆರ್ ಟಿಸಿ ಹೆಚ್ಚುವರಿ ಬಸ್ ಗಳನ್ನು ಬಿಡಲು ನಿರ್ಧರಿಸಿದೆ. 

ಬೆಂಗಳೂರು : ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳ ಹಾಗೂ ಇತರೇ ರಾಜ್ಯಗಳ  ಊರುಗಳಿಗೆ ತೆರಳಲು ಕೆಎಸ್‌ಆರ್‌ಟಿಸಿ ಹೆಚ್ಚುವರಿಯಾಗಿ 1,200 ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಸೆ. 11 ಮತ್ತು 12ರಂದು ಬೆಂಗಳೂರಿನಿಂದ, ಸೆ. 16 ರಂದು ಬೆಂಗಳೂರು ಕಡೆಗೆ ವಿಶೇಷ ಬಸ್ ಕಾರ್ಯಾಚರಣೆ ನಡೆಸಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮ ಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರ ವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಕಡೆಗೆ ಬಸ್ ಹೊರಡಲಿವೆ. 

ಮೈಸೂರು ರಸ್ತೆ ಸ್ಯಾಟ್‌ಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹಾಗೂ ಶಾಂತಿನಗರ ಟಿಟಿಎಂ ಸಿಯಿಂದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಕಡೆಗೆ ಹವಾನಿ ಯಂತ್ರಣ ಬಸ್ ಕಾರ್ಯಾಚರಣೆಗೊಳ್ಳಲಿದೆ. 

ಶಾಂತಿನಗರದಲ್ಲಿನ ಬೆಂಗ ಳೂರು ಕೇಂದ್ರ ಘಟಕ- 4 ಮತ್ತು ಘಟಕ- 2 ರ ಮುಂಭಾಗದಿಂದ ವಿಶೇಷ ಬಸ್ ಸೇವೆ ಕಲ್ಪಿಸಲಾಗಿದೆ. ಪೀಣ್ಯ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ  4 ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಸಂ ಖ್ಯೆಗೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಹೆಚ್ಚುವರಿ ವಿಶೇಷ ಬಸ್‌ಗಳಲ್ಲೂ ಮುಂ ಗಡವಾಗಿ ಕೆಎಸ್‌ಆರ್‌ಟಿಸಿ ವೆಬ್‌ಸೈಟ್  www.ksrtc.in ಮೂಲಕ ಆಸನ ಕಾಯ್ದಿರಿಸಬಹುದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಶ್ಲೀಲ ಕಂಟೆಂಟ್: ಎಕ್ಸ್‌ಗೆ ಕೇಂದ್ರದಿಂದ ನೋಟಿಸ್, 72 ಗಂಟೆಯೊಳಗೆ ಉತ್ತರಿಸಲು ಸೂಚನೆ
ಚುನಾವಣೆಗೂ ಮುನ್ನವೇ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಅಬ್ಬರ! ಮತದಾನಕ್ಕೆ ಮೊದಲೇ 66 ಸ್ಥಾನಗಳು ಮೈತ್ರಿ ಪಾಲಿಗೆ!