
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಸಾರ್ಟಿಸಿ)ವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್)- ಮಣಿಪಾಲ ಮಾರ್ಗದಲ್ಲಿ ಜ.3ರಿಂದ ಒಂದು ಫ್ಲೈ ಬಸ್ ಕಾರ್ಯಾಚರಣೆ ಮಾಡಲು ನಿರ್ಧರಿಸಿದೆ.
ಈ ಬಸ್ ಕೆಐಎಎಲ್ನಿಂದ ರಾತ್ರಿ 10ಕ್ಕೆ ಹೊರಟು ಬೆಳಗ್ಗೆ 6.45ಕ್ಕೆ ಮಣಿಪಾಲ ತಲುಪಲಿದೆ. ಮಣಿಪಾಲದಿಂದ ರಾತ್ರಿ 8.15ಕ್ಕೆ ಹೊರಟು ಬೆಳಗ್ಗೆ 6ಕ್ಕೆ ಕೆಐಎಎಲ್ ತಲುಪಲಿದೆ. ಈ ಬಸ್ನಲ್ಲಿ ವಯಸ್ಕರ ಪ್ರಯಾಣ ದರ .1250 ನಿಗದಿಪಡಿಸಲಾಗಿದೆ.
ಅಂತೆಯೇ ಕೆಐಎಎಲ್-ಮಡಿಕೇರಿ ಮಾರ್ಗದಲ್ಲಿ ಸಂಚರಿಸುವ ಫ್ಲೈ ಬಸ್ಗಳನ್ನು ಜ.3ರಿಂದ ಮೈಸೂರಿನ ಇಸ್ಫೋಸಿಸ್ ಕ್ಯಾಂಪಸ್ ಬಳಿ ಪಿಕ್ಅಪ್ಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್ಸಾರ್ಟಿಸಿ ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.