
ಬೆಂಗಳೂರು(ಅ. 21): ಕೆಂಟುಕಿ ಫ್ರೈಡ್ ಚಿಕನ್ ಸಂಸ್ಥೆಯು ಅದ್ವೈತ್ ಬಯೋಫುಯೆಲ್ ಸಂಸ್ಥೆಯೊಂದಿಗೆ ಕೈಜೋಡಿಸಿದೆ. ಅದರಂತೆ, ಕೆಎಫ್'ಸಿ ಹೋಟೆಲ್'ಗಳಲ್ಲಿ ಬಳಕೆಯಾಗುವ ಅಡುಗೆ ಎಣ್ಣೆಯನ್ನು ಬಳಸಿಕೊಂಡು ಬಯೋಡೀಸೆಲ್ ಆಗಿ ಪರಿವರ್ತಿಸುವ ಯೋಜನೆಯನ್ನು ಈ ಎರಡು ಸಂಸ್ಥೆಗಳು ಕೈಗೆತ್ತಿಕೊಂಡಿವೆ. ಕರ್ನಾಟಕದ ಕೆಎಸ್ಸಾರ್ಟಿಸಿ ಬಸ್ಸುಗಳಿಗೆ ಇದೇ ಬಯೋಡೀಸೆಲ್ ಅನ್ನು ಬಳಕೆ ಮಾಡಲಾಗುತ್ತದೆ ಎಂದು ಕೆಎಫ್'ಸಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ರೆಸ್ಟೋರೆಂಟ್'ವೊಂದು ಈ ಪ್ರಮಾಣದಲ್ಲಿ ಇಂತಹ ಪ್ರಯತ್ನವನ್ನು ನಡೆಸುತ್ತಿರುವುದು ದೇಶದಲ್ಲಿ ಇದೇ ಮೊದಲು ಎಂದು ಕೆಎಫ್'ಸಿ ಸಂಸ್ಥೆ ಹೇಳಿಕೊಂಡಿದೆ. ಕೆಎಸ್ಸಾರ್ಟಿಸಿಯಷ್ಟೇ ಅಲ್ಲ ಮುಂಬೈನ ಸಾರಿಗೆ ಬಸ್ ಸಂಸ್ಥೆ(ಬೆಸ್ಟ್) ಕೂಡ ಕೆಎಫ್'ಸಿ ಅಡುಗೆ ಎಣ್ಣೆಯಿಂದ ತಯಾರಾದ ಜೈವಿಕ ಇಂಧನವನ್ನೇ ಬಳಸಲು ಮುಂದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.