
ನವದೆಹಲಿ (ಮೇ.17): ಮೂರು ದಿನಗಳ ಹಿಂದೆ ಭಾರತದ ಮಾಜಿ ಸೇನಾಧಿಕಾರಿ ಕುಲಭೂಷಣ್ ಜಾಧವ್ ಗಲ್ಲುಶಿಕ್ಷೆ ಪ್ರಕರಣದ ವಿಚಾರಣೆ ನಡೆಸಿದ ಅಂತರಾಷ್ಟ್ರೀಯ ನ್ಯಾಯಾಲಯ ನಾಳೆ ತೀರ್ಪು ನೀಡಲಿದೆ.
ಮೂಲಗಳ ಪ್ರಕಾರ ನಾಲೆ ಮಧ್ಯಾಹ್ನ 3.30 ರ ಸುಮಾರಿಗೆ ತೀರ್ಪು ಹೊರಬೀಳುವ ಸಾಧ್ಯತೆಯಿದೆ.
ಅಂತರಾಷ್ಟ್ರೀಯ ನ್ಯಾಯಾಲಯದ ತೀರ್ಪು ಹೊರಬೀಳುವ ಮುನ್ನವೇ ಪಾಕಿಸ್ತಾನ ಕುಲಭೂಷಣ್ ರವರನ್ನು ಗಲ್ಲಿಗೇರಿಸುವ ಅಪಾಯವಿದೆ.ಹಾಗಾಗಿ ಕೂಡಲೇ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಭಾರತ ಪ್ರಬಲವಾಗಿ ನ್ಯಾಯಾಲಯದಲ್ಲಿ ವಾದಿಸಿತ್ತು. ಭಾರತದ ಪರ ಹರೀಶ್ ಸಾಳ್ವೆ ವಾದ ಮಂಡಿಸಿದ್ದರು. 11 ನ್ಯಾಯಾಧೀಶರ ಪೀಠವು ಎರಡೂ ದೇಶಗಳ ವಾದವನ್ನು ಆಲಿಸಿದ್ದು ನಾಳೆ ಹೊರ ಬೀಳುವ ತೀರ್ಪು ಎರಡೂ ದೇಶಗಳಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿದೆ.
18 ವರ್ಷಗಳ ನಂತರ ಉಭಯ ದೇಶಗಳು ಅಂತರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.