ಕುಲಭೂಷಣ್ ಜಾಧವ್ ಪ್ರಕರಣ: ಐಸಿಜೆಯಲ್ಲಿ ಹೋರಾಡಲು ನೂತನ ವಕೀಲರ ತಂಡ ನೇಮಕ

Published : May 19, 2017, 04:27 PM ISTUpdated : Apr 11, 2018, 12:40 PM IST
ಕುಲಭೂಷಣ್ ಜಾಧವ್ ಪ್ರಕರಣ: ಐಸಿಜೆಯಲ್ಲಿ ಹೋರಾಡಲು ನೂತನ ವಕೀಲರ ತಂಡ ನೇಮಕ

ಸಾರಾಂಶ

ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೀಡಾದ ಪಾಕಿಸ್ತಾನ ಎಂದಿನಂತೆ ತನ್ನ ಮೊಂಡುತನವನ್ನು ಪ್ರದರ್ಶಿಸಲು ಮುಂದಾಗಿದೆ. ಐಸಿಜೆಯಲ್ಲಿ ಕುಲಭೂಷಣ್ ಜಾಧವ್ ಪ್ರಕರಣದ ವಿರುದ್ಧ ಪ್ರಬಲವಾಗಿ ಹೋರಾಡಲು ಹೊಸ ವಕೀಲರ ತಂಡವನ್ನು ನೇಮಿಸಲು ಪ್ಲಾನ್ ಮಾಡುತ್ತಿದೆ.

ನವದೆಹಲಿ (ಮೇ.19): ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೀಡಾದ ಪಾಕಿಸ್ತಾನ ಎಂದಿನಂತೆ ತನ್ನ ಮೊಂಡುತನವನ್ನು ಪ್ರದರ್ಶಿಸಲು ಮುಂದಾಗಿದೆ. ಐಸಿಜೆಯಲ್ಲಿ ಕುಲಭೂಷಣ್ ಜಾಧವ್ ಪ್ರಕರಣದ ವಿರುದ್ಧ ಪ್ರಬಲವಾಗಿ ಹೋರಾಡಲು ಹೊಸ ವಕೀಲರ ತಂಡವನ್ನು ನೇಮಿಸಲು ಪ್ಲಾನ್ ಮಾಡುತ್ತಿದೆ.

ಜಾಧವ್ ಪ್ರಕರಣದಲ್ಲಿ ವಾದ ಮಾಡಿದ ವಕೀಲರ ತಂಡಕ್ಕೆ ಇಂತಹ ಜಟಿಲವಾದ ವಿಚಾರದ ಬಗ್ಗೆ ಅನುಭವವಿಲ್ಲ. ಹಾಗಾಗಿ ನಾವು ಹೊಸ ತಂಡವನ್ನು ನೇಮಿಸಲಿದ್ದೇವೆ. ಈ ತಂಡವು  ಐಸಿಜೆಯಲ್ಲಿ ಪಾಕಿಸ್ತಾನದ ನಿಲುವನ್ನು ಗಟ್ಟಿಯಾಗಿ ಪ್ರತಿಪಾದಿಸಲಿದೆ ಎಂದು ಪಾಕ್ ಪ್ರಧಾನ ಮಂತ್ರಿಯ ಸಲಹೆಗಾರ ಸರ್ತಾಜ್ ಆಜಿಜ್ ಹೇಳಿದ್ದಾರೆ.

ಪಾಕಿಸ್ತಾನ ಮಿಲಿಟರಿ ಕೋರ್ಟ್ ಕುಲಭೂಷಣ್ ಗೆ ವಿಧಿಸಿದ್ದ ಗಲ್ಲುಶಿಕ್ಷೆಗೆ  ಐಸಿಜೆ ನಿನ್ನೆ ತಡೆ ನೀಡಿತ್ತು. ಇದರಿಂದಾಗಿ ಬಾರೀ ಭರವಸೆ ಇಟ್ಟುಕೊಂಡಿದ್ದ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಅಲ್ಲಿನ ಪ್ರತಿಪಕ್ಷಗಳು, ಕಾನೂನು ಪಂಡಿತರು ನವಾಜ್ ಶರೀಫ್ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ. ಹಾಗಾಗಿ ವಾದವನ್ನು ಇನ್ನಷ್ಟು ಪ್ರಬಲಗೊಳಿಸಲು ಹೊಸ ವಕೀಲರ ತಂಡವನ್ನು ನೇಮಿಸಲಿದೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ