
ಮಂಡ್ಯ(ಡಿ.25): ನಿನ್ನೆ ಹಲಗೂರು ಸಮೀಪ ಕೊಲೆಯಾದ ಜೆಡಿಎಸ್ ಕಾರ್ಯಕರ್ತ ಬೆನಗನಹಳ್ಳಿಯ ಕುಮಾರ್ ಮನೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ, ಮಾತನಾಡಿದ ಕುಮಾರಸ್ವಾಮಿ ಕೊಲೆಗೆ ಸಂಬಂಧಿಸಿದಂತೆ ಯಾರ ಮೇಲೂ ಆಪಾದನೆ ಮಾಡಲ್ಲ. ಯಾರು ಈ ಕೊಲೆ ಮಾಡಿದ್ದಾರೋ ಅವರನ್ನ ಪೊಲೀಸ್ ಇಲಾಖೆ ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸಿದರು.
ಇದೇವೇಳೆ, ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿ ಪಕ್ಷದಿಂದ ಅಮಾನತಾಗಿರುವ ಜಮೀರ್ ಅಹಮದ್ ಹಾಗೂ ಬಾಬು ಬಂಡಿಸಿದ್ದೇಗೌಡರ ವಿರುದ್ದ ಹರಿಹಾಯ್ದರು.
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡುವುದಾಗಿ ನನಗೇ ನೇರವಾಗಿ ಹೇಳಿದ್ದರು. ನನ್ನ ಮುಖಕ್ಕೆ ಹೊಡೆದ ಹಾಗೆ ಹೇಳಿದ್ದರು. ಅವರು ಹಾಗೆಯೇ ಮಾಡಿದ್ದಾರೆ, ಈಗ ಆಣೆ ಮಾಡಲು ಏನಿದೆ? ಅವರೆಲ್ಲ ತುಂಬಾ ದೊಡ್ಡವರಿದ್ದಾರೆ, ಅವರು ನಮ್ಮ ಪಕ್ಷಕ್ಕೆ ಬೇಡ.ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.