
ಬೆಂಗಳೂರು, [ಜೂನ್.03].: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಹಳೆ ಗ್ರಾಮ ವಾಸ್ತವ್ಯವನ್ನು ಈಗ ಹೊಸ ರೂಪದಲ್ಲಿ ಉತ್ತರ ಕರ್ನಾಟಕ ಭಾಗದಿಂದ ಆರಂಭಿಸಲಿದ್ದಾರೆ.
ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಹಾಗೂ ಜೂನ್ 22 ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ನಿಮ್ಮೂರಿಗೆ ಬರ್ತಾರೆ, ಶಾಲೆಯಲ್ಲಿ ತಂಗ್ತಾರೆ: ಸಿಎಂ ನಡೆಯ ಹಿಂದಿದೆ ಸೀಕ್ರೆಟ್!
ಅದರಂತೆಯೇ ಜುಲೈ 5 ಹಾಗೂ 6 ರಂದು ಬೀದರ್, ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕುಗಳಲ್ಲಿ ಗ್ರಾಮ ವಾಸ್ತವ್ಯ ಮುಂದುವರಿಯಲಿದೆ.ಗ್ರಾಮ ವಾಸ್ತವ್ಯದ ವೇಳೆ ಆಯಾ ಹಳ್ಳಿಯ ಸಮಸ್ಯೆಗಳ ಬಗ್ಗೆ ಸ್ಥಳದಲ್ಲಿಯೇ ಅಧಿಕಾರಿಗಳ ಜತೆ ಸಭೆ, ಚರ್ಚೆಗಳನ್ನು ನಡೆಸಲಿದ್ದಾರೆ.
ಈ ಬಾರಿ ಗ್ರಾಮ ವಾಸ್ತವ್ಯದ ವಿಶೇಷ ಅಂದ್ರೆ ಯಾರ ಮನೆಯಲ್ಲೂ ಉಳಿದುಕೊಳ್ಳುತ್ತಿಲ್ಲ. ಬದಲಾಗಿ ಭೇಟಿ ನೀಡುವ ಆ ಊರಿನ ಸರ್ಕಾರಿ ಶಾಲೆಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಈ ಬಗ್ಗೆ ಕುಮಾರಸ್ವಾಮಿ ಅವರು ಇಂದು [ಸೋಮವಾರ] ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ್ದು, ಗ್ರಾಮ ವಾಸ್ತವ್ಯದ ಸ್ವರೂಪ ಹೇಗಿರಬೇಕು ಎಂಬ ಕುರಿತು ಮಾತುಕತೆ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.