ಬಿಜೆಪಿ ಅಸಮಾಧಾನ: ಮೋದಿಗೂ ಮುಟ್ಟಿತು ಟಿಕೆಟ್ ಫೈಟ್ ಗಲಾಟೆ

Published : Apr 27, 2019, 03:33 PM IST
ಬಿಜೆಪಿ ಅಸಮಾಧಾನ: ಮೋದಿಗೂ ಮುಟ್ಟಿತು ಟಿಕೆಟ್ ಫೈಟ್ ಗಲಾಟೆ

ಸಾರಾಂಶ

ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ಕಾವು ಜೋರಾಗಿದೆ. 

ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ  ವಿಧಾನಸಭಾ ಉಪ ಚುನಾವಣೆ ಕಾವು ಹೆಚ್ಚಾಗಿದೆ. ಕುಂದಗೋಳ ವಿಧಾನಸಭೆಗೆ ಉಪ ಚುನಾವಣೆ ನಡೆಯುತ್ತಿದ್ದು, ಇಲ್ಲಿನ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನ ಸ್ಫೋಟವಾಗಿದೆ. 

ಪಕ್ಷದಿಂದ ಎಮ್.ಆರ್ ಪಾಟೀಲ್ ಗೆ ನೀಡುವಂತೆ ಬಿಜೆಪಿ ಮುಖಂಡ ಪ್ರಕಾಶ್ ಗೌಡ ಪಾಟೀಲ್  ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾಗೆ ಟ್ವೀಟ್ ಮಾಡಿ ಬೇಡಿಕೆ ಇಟ್ಟಿದ್ದಾರೆ.  ಕುಂದಗೋಳ ಕ್ಷೇತ್ರದಲ್ಲಿ ಎಮ್.ಆರ್.ಪಾಟೀಲ್ ಪರವಾದ ಅಲೆಯಿದ್ದು, ಸ್ಥಳೀಯ ಮುಖಂಡರು ಇವರನ್ನು ಕಡೆಗಣಿಸಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.  

ಬಿಜೆಪಿ ಈಗಾಗಲೇ ಎಸ್.ಐ ಚಿಕ್ಕನಗೌಡರಿಗೆ ಟಿಕೆಟ್ ನೀಡಲು ಸಿದ್ಧತೆ ನಡೆಸಿದ್ದು, ಅಧಿಕೃತವಾಗಿ ಈ ಬಗ್ಗೆ ಘೋಷಣೆಯೊಂದೇ ಬಾಕಿ ಇದೆ. ಬಿ ಫಾರಂ ವಿತರಣೆಗೂ ಮೊದಲೇ ಚಿಕ್ಕನಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ನಿಟ್ಟಿನಲ್ಲಿ ದೂರು ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!