ಮೈತ್ರಿ ನಾಯಕರಿಗೆ ಶಾಕ್: ಕುಂದಗೋಳದಲ್ಲಿ ಕಮಲ ಹಿಡಿದ ಕೈ ನಾಯಕ

Published : May 12, 2019, 02:03 PM IST
ಮೈತ್ರಿ ನಾಯಕರಿಗೆ ಶಾಕ್: ಕುಂದಗೋಳದಲ್ಲಿ ಕಮಲ ಹಿಡಿದ ಕೈ ನಾಯಕ

ಸಾರಾಂಶ

ಮೈತ್ರಿ ನಾಯಕರಿಗೆ ಸಾಕ್| ಕೈ ಬಿಟ್ಟು ಕಮಲ ಹಿಡಿದ ನಾಯಕ| ಕುಂದಗೋಳದಲ್ಲಿ ಗರಿಗೆದರಿದ ರಾಜಕೀಯ ಬೆಳವಣಿಗೆ

ಧಾರವಾಡ[ಮೇ.12]: ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಏ.19 ರಂದು ನಡೆಯಲಿದೆ. ಈಗಾಗಲೇ ಮತದಾರರನ್ನು ಸೆಳೆಯಲು ರಾಜ್ಯ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಹೀಗಿರುವಾಗ ಮೈತ್ರಿ ನಾಯಕರಿಗೆ ಬಿಗ್ ಶಾಕ್ ತಗುಲಿದ್ದು, ಕಾಂಗ್ರೆಸ್ ತಾಲೂಕು ಪಂಚಾಯಿತ್ ಕಾಂಗ್ರೆಸ್ ಸದಸ್ಯ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಇಲ್ಲಿನ ತಾಲೂಕು ಪಂಚಾಯಿತಿ ಸದಸ್ಯ ಈಶ್ವರಪ್ಪ ಯಲಿವಾಳ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಈಶ್ವರಪ್ಪ ಯಲಿವಾಳ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಕಮಲಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಮೈತ್ರಿ ನಾಯಕರು ಸರ್ವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ನಾವು ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ. ಸಚಿವ ಡಿ.ಕೆ.ಶಿವಕುಮಾರ್ ಹಣ, ಹೆಂಡ ಹಂಚಿ ಚುನಾವಣೆಯಲ್ಲಿ ಗೆಲ್ಲಲು ಹೊರಟಿದ್ದಾರೆ. ನಮ್ಮ ಮುಖಂಡರಿಗೆ ಆಮಿಷವೊಡ್ಡುತ್ತಿದ್ದಾರೆ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ