
ಕೊಪ್ಪಳ[ಜು.15]: ಕುರುಬ ಸಮುದಾಯವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಲು ಹಾಲುಮತ ಮಹಾಸಭಾ ಸರ್ಕಾರವನ್ನು ಆಗ್ರಹಿಸಿದೆ.
ಕುರುಬರ ಶಕ್ತಿಕೇಂದ್ರ ಶ್ರೀಕನಕಗುರುಪೀಠದಲ್ಲಿ ಶ್ರೀಗಳ ನೇತೃತ್ವದಲ್ಲಿ ನಡೆದ ಸಂಘದ ಪೂರ್ವಭಾವಿ ಸಭೆಯಲ್ಲಿ ಸಮುದಾಯವನ್ನು ಎಸ್ ಟಿಗೆ ಸೇರಿಸುವುದರ ಜೊತೆಗೆ ಹಲವು ನಿರ್ಣಯಗಳನ್ನು ಕೈಗೊಂಡರು.
ಕುರುಬರಿಗೆ ಎಸ್. ಟಿ ಮೀಸಲಾತಿ ಬೇಕು ಎಂಬ ಕೂಗನ್ನು ಸಂವಾದ, ಜನಾಭಿಪ್ರಾಯ ಸಭೆಗಳು, ಸಮಾವೇಶ, ಧರಣಿಗಳ ಮೂಲಕ ಸರ್ಕಾರಕ್ಕೆ ಹಲವು ಬಾರಿ ಮುಟ್ಟಿಸಲಾಗಿದೆ. ಆದರೆ ಸಮುದಾಯದ ಕೂಗನ್ನು ಸರ್ಕಾರಗಳು ಇಲ್ಲಿಯವರೆಗೂ ಪರಿಗಣಿಸಿಲ್ಲ. ಇನ್ನಾದರೂ ಸಮುದಾಯದ ಮನವಿಯನ್ನು ಪರಿಗಣಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಮುಖಂಡರು ಎಚ್ಚರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.