ಹೀರೋ ಆದ ಮಾಜಿ ಸಿಎಂ ಸಿದ್ದರಾಮಯ್ಯ

Published : Jun 12, 2018, 07:38 AM IST
ಹೀರೋ ಆದ ಮಾಜಿ ಸಿಎಂ ಸಿದ್ದರಾಮಯ್ಯ

ಸಾರಾಂಶ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರುಬ ಸಮುದಾಯದ ಹೀರೋ. ಆದರೆ, ಸಿದ್ದರಾಮಯ್ಯ ಅವರನ್ನು ವಿಲನ್‌ ಎಂದು ಬಿಂಬಿಸುತ್ತಿರುವ ಎಚ್‌.ಎಂ. ರೇವಣ್ಣ ಅವರೇ ವಾಸ್ತವವಾಗಿ ಸಮುದಾಯದ ವಿಲನ್‌ ಎಂದು ಕಾಂಗ್ರೆಸ್‌ನ ಕುರುಬ ಸಮುದಾಯದ ಶಾಸಕರು ಆರೋಪಿಸಿದ್ದಾರೆ.  

ಬೆಂಗಳೂರು :  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರುಬ ಸಮುದಾಯದ ಹೀರೋ. ಆದರೆ, ಸಿದ್ದರಾಮಯ್ಯ ಅವರನ್ನು ವಿಲನ್‌ ಎಂದು ಬಿಂಬಿಸುತ್ತಿರುವ ಎಚ್‌.ಎಂ. ರೇವಣ್ಣ ಅವರೇ ವಾಸ್ತವವಾಗಿ ಸಮುದಾಯದ ವಿಲನ್‌ ಎಂದು ಕಾಂಗ್ರೆಸ್‌ನ ಕುರುಬ ಸಮುದಾಯದ ಶಾಸಕರು ಆರೋಪಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಸುರೇಶ್‌ ಹಾಗೂ ರಾಮಪ್ಪ ಅವರು, ಸಿದ್ದರಾಮಯ್ಯ ಅವರು ಕುರುಬ ಸಮುದಾಯದ ಹೀರೋ. ಈ ಬಾರಿ ಸಚಿವ ಸಂಪುಟದಲ್ಲಿ ಅವರು ಕುರುಬರಿಗೆ ಅನ್ಯಾಯ ಮಾಡಿದ್ದಾರೆ ಎಂಬುದು ಸುಳ್ಳು. ಇನ್ನೂ ಆರು ಸ್ಥಾನಗಳು ಖಾಲಿ ಇವೆ. ಈ ಪೈಕಿ ಎರಡು ಸ್ಥಾನವನ್ನು ಕುರುಬ ಸಮುದಾಯಕ್ಕೆ ದೊರೆಯುವಂತೆ ಸಿದ್ದರಾಮಯ್ಯ ಅವರೇ ಮಾಡುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರನ್ನು ಕುರುಬ ಸಮುದಾಯದ ವಿಲನ್‌ ಎಂದು ಎಚ್‌.ಎಂ. ರೇವಣ್ಣ ಹೇಳಿದ್ದಾರೆ. ಆದರೆ, ಸಿದ್ದರಾಮಯ್ಯ ಸದಾ ಸಮುದಾಯ ಹೀರೋ ಆಗಿಯೇ ಇರುತ್ತಾರೆ. ಅವರನ್ನು ವಿಲನ್‌ ಎನ್ನುತ್ತಿರುವ ರೇವಣ್ಣ ಅವರೇ ವಾಸ್ತವವಾಗಿ ವಿಲನ್‌. ಸಮುದಾಯ ಎಂದಿಗೂ ಸಿದ್ದರಾಮಯ್ಯ ಪರ ಇರುತ್ತದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂದು ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ
ನಾನು ಶಾಲೇಲಿ ತುಂಬಾ ತುಂಟನಾಗಿದ್ದೆ : ರಾಹುಲ್‌