ನೆಲಮಂಗಲದಿಂದ ಸ್ಪರ್ಧೆ ಮಾಡಲಿದ್ದಾರಾ ಎಲ್.ಹನುಮಂತಯ್ಯ..?

Published : Mar 07, 2018, 01:00 PM ISTUpdated : Apr 11, 2018, 12:59 PM IST
ನೆಲಮಂಗಲದಿಂದ ಸ್ಪರ್ಧೆ ಮಾಡಲಿದ್ದಾರಾ ಎಲ್.ಹನುಮಂತಯ್ಯ..?

ಸಾರಾಂಶ

ಜೆಡಿಎಸ್‌ನಿಂದ ಹಾಲಿ ಶಾಸಕ ಡಾ. ಶ್ರೀನಿವಾಸಮೂರ್ತಿ ಅವರನ್ನೇ  ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಕಾಂಗ್ರೆಸ್‌ನಿಂದ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಅಂಜನಮೂರ್ತಿ ಮತ್ತೆ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದರೂ ಈ ಬಾರಿ ಈ ಕ್ಷೇತ್ರದ ಟಿಕೆಟ್ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಲ್.ಹನುಮಂತಯ್ಯ ಅವರಿಗೆ ದೊರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ನೆಲಮಂಗಲ :  ಜೆಡಿಎಸ್‌ನಿಂದ ಹಾಲಿ ಶಾಸಕ ಡಾ. ಶ್ರೀನಿವಾಸಮೂರ್ತಿ ಅವರನ್ನೇ  ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಕಾಂಗ್ರೆಸ್‌ನಿಂದ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಅಂಜನಮೂರ್ತಿ ಮತ್ತೆ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದರೂ ಈ ಬಾರಿ ಈ ಕ್ಷೇತ್ರದ ಟಿಕೆಟ್ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಲ್.ಹನುಮಂತಯ್ಯ ಅವರಿಗೆ ದೊರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಜ್ಯ ನಾಯಕತ್ವವೇ ಹನುಮಂತಯ್ಯ ಅವರಿಗೆ ಈ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವೊಲಿಸಿದೆ ಎನ್ನಲಾಗುತ್ತಿದೆ. ಇಷ್ಟಾಗಿಯೂ ಸ್ಥಳೀಯರಾದ ಕಮಲಾಕ್ಷಿ ರಾಜಣ್ಣ ಅವರು ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ.

ಬಿಜೆಪಿಯಿಂದ ಕಳೆದ ಬಾರಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಶಾಸಕ ನಾಗರಾಜ್ ಅವರ ಹೆಸರು ಮುಂಚೂಣಿಯಲ್ಲಿದೆ. ಜತೆಗೆ ಹೊಂಬಯ್ಯ ಎಂಬುವರ ಹೆಸರೂ ಕೇಳಿಬರುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೂಪಾಯಿ ಕುಸಿದರೂ ಪ್ರಗತಿಯತ್ತ ಭಾರತ: ನಿಜಕ್ಕೂ ಏನಾಗುತ್ತಿದೆ?‌
87 ವರ್ಷದ ಪ್ರಸಿದ್ಧ ಪೇಂಟರ್ ಮಗುವಿಗೆ ತಾಯಿಯಾದ 37 ವರ್ಷದ ಪತ್ನಿ, ಉಳಿದ ಮಕ್ಕಳೊಂದಿಗೆ ಬಂಧವೇ ಕಟ್