ಭೀಷ್ಮನ ಮಾತನ್ನು ಮೋದಿ, ಶಾ ನೆರವೇರಿಸುವರೆ ?

Published : Oct 09, 2018, 06:20 PM ISTUpdated : Oct 09, 2018, 10:49 PM IST
ಭೀಷ್ಮನ ಮಾತನ್ನು ಮೋದಿ, ಶಾ ನೆರವೇರಿಸುವರೆ ?

ಸಾರಾಂಶ

ಅಡ್ವಾಣಿ ತನಗೆ ಇನ್ನೊಮ್ಮೆ ಗಾಂಧಿ ನಗರದಿಂದ ಸ್ಪರ್ಧಿಸುವ ಇಚ್ಛೆಯಿದೆ ಎಂದು ಹೇಳಿಕೊಂಡಿದ್ದಾರೆ. 2019ರಲ್ಲಿ ಯಾರಿಗೂ ಬಹುಮತ ಸಿಗದೆ ಇದ್ದರೆ ಒಂದು ಅವಕಾಶ ಪವಾಡ ರೂಪದಲ್ಲಿ ಸಿಕ್ಕರೂ ಸಿಗಬಹುದು ಎಂಬ ಯೋಚನೆ ಇರಬಹುದೇನೋ.

ನವದೆಹಲಿ[ಅ.09]: 90 ವರ್ಷ ವಯಸ್ಸಾದರೂ ಬಿಜೆಪಿ ಭೀಷ್ಮ ಲಾಲ…ಕೃಷ್ಣ ಅಡ್ವಾಣಿ ಅವರಿಗೆ ನಿವೃತ್ತಿ ಆಗುವ ಮನಸ್ಸಿಲ್ಲ. ಇತ್ತೀಚೆಗೆ ಗುಜರಾತ್‌ನ ಮೋದಿ ಮತ್ತು ಅಮಿತ್‌ ಶಾ ಅವರಿಗೆ ಹತ್ತಿರದ ನಾಯಕರೊಬ್ಬರನ್ನು ಮನೆಗೆ ಕರೆಸಿಕೊಂಡಿದ್ದ ಅಡ್ವಾಣಿ ತನಗೆ ಇನ್ನೊಮ್ಮೆ ಗಾಂಧಿ ನಗರದಿಂದ ಸ್ಪರ್ಧಿಸುವ ಇಚ್ಛೆಯಿದೆ ಎಂದು ಹೇಳಿಕೊಂಡಿದ್ದಾರೆ. 2019ರಲ್ಲಿ ಯಾರಿಗೂ ಬಹುಮತ ಸಿಗದೆ ಇದ್ದರೆ ಒಂದು ಅವಕಾಶ ಪವಾಡ ರೂಪದಲ್ಲಿ ಸಿಕ್ಕರೂ ಸಿಗಬಹುದು ಎಂಬ ಯೋಚನೆ ಇರಬಹುದೇನೋ.

ಎಲ್ಲವೂ ಅದಲು ಬದಲು

ಕಳೆದ ವಾರ ಗೋಕರ್ಣ ದೇವಸ್ಥಾನದ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆದಾಗ ರಾಮಚಂದ್ರಾಪುರ ಮಠದ ಪರವಾಗಿ ವಾದಿಸಲು ಕಾಂಗ್ರೆಸ್‌ ದಿಗ್ಗಜ ಕಪಿಲ್ ಸಿಬಲ್ ನಿಂತಿದ್ದರೆ, ಎದುರಿಗೆ ರಾಮಚಂದ್ರಾಪುರ ಮಠವನ್ನು ವಿರೋಧಿಸಲು ನಿಂತವರು ಬಿಜೆಪಿಗೆ ಹತ್ತಿರದವರಾದ ಅರುಣ್‌ ಜೇಟ್ಲಿ ಅವರ ಮಿತ್ರ ಮುಕುಲ್ ರೋಹಟಗಿ ಮತ್ತು ಸಾಲಿಸಿಟರ್‌ ಜನರಲ್ ರಣಜಿತ್‌ ಕುಮಾರ್‌. ಅಂದ ಹಾಗೆ ಬಿಜೆಪಿ ಸರ್ಕಾರ ಮಠಕ್ಕೆ ಗೋಕರ್ಣ ದೇವಸ್ಥಾನ ಕೊಟ್ಟಿದ್ದನ್ನು ಕಪಿಲ್ ಸಿಬಲ್ ಸಮರ್ಥಿಸಿಕೊಳ್ಳುತ್ತಿದ್ದರೆ, ಬಿಜೆಪಿಗೆ ಹತ್ತಿರದ ವಕೀಲರು ವಿರೋಧಿಸುತ್ತಿದ್ದರು. ಕಪಿಲ್ ಸಿಬಲ್ ಅಂತೂ ದೇವಸ್ಥಾನವನ್ನು ಸರ್ಕಾರ ವಶಪಡಿಸಿಕೊಂಡಿದ್ದಕ್ಕೆ ಕರ್ನಾಟಕದಲ್ಲಿ ಕಾನೂನು ಎಂಬುದೇ ಇಲ್ಲ ಎಂದು ಟೀಕಿಸುತ್ತಿದ್ದರು.

- ಪ್ರಶಾಂತ್ ನಾತು ಅವರ ಇಂಡಿಯಾ ಗೇಟ್ ಅಂಕಣ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಲ್ಯಾಣ ಕರ್ನಾಟಕ ನಾಡು ಈಗ ಗಾಂಜಾ ನೆಲೆವೀಡು: ನಶೆಯಲ್ಲಿ ತೇಲುತ್ತಿರೋ ಯುವ ಜನಾಂಗ
ದುಡಿಯುವ ಮಹಿಳೆಗೆ ಪತಿ ಜೀವನಾಂಶ ಕೊಡಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು