
ಬೆಂಗಳೂರು (ಡಿ.01): ಪದ್ಮಾವತಿ ಸಿನಿಮಾ ಪರ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಬ್ಯಾಟಿಂಗ್ ಮಾಡಿದ್ದಾರೆ. ಸಂಜಯ್ ಲೀಲಾ ಬನ್ಸಾಲಿಗೆ ಬೆಂಬಲ ಸೂಚಿಸಿದ ಎಲ್ ಕೆ ಆಡ್ವಾಣಿ ಅಪದ್ಮಾವತಿ ವಿಚಾರದಲ್ಲಿ ಸಮಿತಿ ಮೂಗು ತೂರಿಸುವ ಅಗತ್ಯ ಇಲ್ಲ ಎಂದ ಅಡ್ವಾಣಿ ಹೇಳಿದ್ದಾರೆ.
ನಿನ್ನೆ ಬಿಜೆಪಿ ಎಂಪಿ ಅನುರಾಗ್ ಟಾಕೂರ್ ಅಧ್ಯಕ್ಷತೆಯಲ್ಲಿ ನಡೆದ 30 ಜನರ ಸಂಸದೀಯ ಸಮಿತಿ ಸಭೆಯಲ್ಲಿ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಹಾಜರಾಗಿದ್ದರು. ಪ್ರಶ್ನೋತ್ತರ ವೇಳೆ, ಸೂಫಿ ಕವಿಯೊಬ್ಬರ ಕವಿತೆ ಆಧರಿಸಿ ಸಿನಿಮಾ ಮಾಡಲಾಗಿದೆ. ಈ ಸಿನಿಮಾದಲ್ಲಿ ರಾಣಿ ಪದ್ಮಾವತಿಗೆ ಕಳಂಕ ತರುವ ಯಾವುದೇ ದೃಶ್ಯವಿಲ್ಲ. ಯಾರ ಭಾವನೆಗಳಿಗೂ ನೋವಾಗುವಂತಹ ದೃಶ್ಯಗಳು ಈ ಸಿನಿಮಾದಲ್ಲಿಲ್ಲ ಎಂದ ಬನ್ಸಾಲಿ ಸ್ಪಷ್ಟೀಕರಣ ಕೊಟ್ಟಿದ್ದಾರೆ.
ಸೆನ್ಸಾರ್'ಗೆ ಬರುವುದಕ್ಕೂ ಮೊದಲು ಆಯ್ದ ಕೆಲ ಮಾಧ್ಯಮ ಪ್ರತಿನಿಧಿಗಳಿಗೆ ಸಿನಿಮಾ ತೋರಿಸಿದ್ದಕ್ಕೆ ಸಮಿತಿ ಸದಸ್ಯರು ಬನ್ಸಾಲಿ ವಿರುದ್ಧ ಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.