
ಮಂಗಳೂರು : ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ಗಳ ಟೋಪಿ ಬದಲಾವಣೆಗೆ ಚಿಂತನೆ ನಡೆಯುತ್ತಿರುವ ವೇಳೆಯೇ ಮಹಿಳಾ ಕಾನ್ಸ್ಟೇಬಲ್ಗಳ ಸಮವಸ್ತ್ರ ಬದಲಾವಣೆ ಬಗ್ಗೆಯೂ ಚರ್ಚೆ ನಡೆದಿದೆ. ಇನ್ನು ಮುಂದೆ ಸೀರೆ ಬದಲಿಗೆ ಪ್ಯಾಂಟ್, ಶರ್ಟ್ ಸಮವಸ್ತ್ರ ನಿಯಮ ಜಾರಿಗೆ ತರುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಪರಮೇಶ್ವರ್ ಸುಳಿವು ನೀಡಿದ್ದಾರೆ.
ಭಟ್ಕಳಕ್ಕೆ ಖಾಸಗಿ ಭೇಟಿಗೆ ತೆರಳುವ ಮುನ್ನ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಪೊಲೀಸ್ ಸಿಬ್ಬಂದಿಗೆ ಸೀರೆಯಲ್ಲಿ ಕರ್ತವ್ಯ ನಿರ್ವಹಿಸಲು ಕಷ್ಟವಾಗುತ್ತಿರುವುದರಿಂದ ಸಮವಸ್ತ್ರ ಬದಲಾಯಿಸುವ ಕುರಿತು ಡಿಜಿಪಿ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದರು.
ಔರಾದ್ಕರ್ ಶಿಫಾರಸು ಜಾರಿ: ಪೊಲೀಸರ ಬಡ್ತಿ, ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಔರಾದ್ಕರ್ ಸಮಿತಿ ಶಿಫಾರಸಿನಲ್ಲಿ ಕೆಲವೊಂದು ಜಾರಿಯಾಗಿದೆ. 12 ಸಾವಿರ ಬ್ಯಾಕ್ಲಾಗ್ ಹುದ್ದೆಗಳು ಭರ್ತಿಯಾಗಿವೆ. ಪೊಲೀಸರ ವೇತನ ಪರಿಷ್ಕರಣೆಯಾಗಿದೆ. ಪೊಲೀಸರ ವೇತನವನ್ನು ಬೇರೆ ಸರ್ಕಾರಿ ಇಲಾಖೆಯ ಸಿಬ್ಬಂದಿ ವೇತನಕ್ಕೆ ಸಮಾನಗೊಳಿಸುವ ನಿಟ್ಟಿನಲ್ಲಿ ಸಮಿತಿ ಶಿಫಾರಸನ್ನು ಆರನೇ ವೇತನ ಆಯೋಗ ಜಾರಿ ವೇಳೆ ಅನುಷ್ಠಾನಕ್ಕೆ ತರಲಾಗುವುದು ಎಂದು ಡಾ.ಪರಮೇಶ್ವರ್ ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.