
ಶಬರಿಮಲೆ (ನ.20): 50 ವರ್ಷದ ಒಳಗಿನ ಮಹಿಳೆಯೊಬ್ಬರು, ಕೇರಳದ ಆರೋಗ್ಯ ಸಚಿವ ಕೆ.ಕೆ. ಶೈಲಜಾ ಅವರ ಜೊತೆ ಅಯ್ಯಪ್ಪ ಸ್ವಾಮಿ ದೇವಾಲಯ ಪ್ರವೇಶಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಹಳದಿ ಸೀರೆ ಧರಿಸಿದ್ದ ಮಹಿಳೆ, ಆರೋಗ್ಯ ಸಚಿವರ ಜೊತೆ ದೇವಾಲಯ ಪ್ರವೇಶಿಸಿದ ಬಗ್ಗೆ ವಿಡಿಯೋ ಮತ್ತು ಫೋಟೋ ಹರಿ ದಾಡುತ್ತಿವೆ. ಇದಕ್ಕೆ ತಿರುವಾಂಕೂರು ದೇವಸ್ವಂ ಮಂಡಳಿ ಹೊಣೆ ಎಂದು ಹಿಂದು ಸಂಘಟನೆಗಳು ಆರೋಪಿಸಿವೆ. ಈ ನಡುವೆ 31 ವರ್ಷದ ಮಹಿಳೆಯೊ ಬ್ಬಳು ಇಲ್ಲಿನ ಅಯ್ಯಪ್ಪಸ್ವಾಮಿ ದೇಗುಲ ಪ್ರವೇಶಿಸಲು ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ. ಆಂಧ್ರ ಮೂಲದ ಮಹಿಳೆಯನ್ನು ದೇವಾಲಯದ ಮೆಟ್ಟಿಲ ಬಳಿಯೇ ತಡೆದು ಹೊರಗೆ ಕಳುಹಿಸಲಾಗಿದೆ. ದೇವಾಲಯದ ಸಂಪ್ರದಾಯದ ಪ್ರಕಾರ, 10 ರಿಂದ 50 ವರ್ಷದ ಒಳಗಿನ ಮಹಿಳೆರು ದೇವಾಲಯದ ಒಳ ಪ್ರವೇಶಿಸುವಂತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.