
ಬಾಗಲಕೋಟೆ(ಅ.15): ಗೆಳತಿ ಜೊತೆ ಸೇರಿ ಪತಿಗೆ ವಿಷಪ್ರಾಶನ ಮಾಡಿಸಿ ಕೊಲೆಗೈದು ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯುವ ವೇಳೆ ಪೋಲಿಸರ ಕೈಗೆ ಮಹಿಳೆ ಸಿಕ್ಕಿಬಿದ್ದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ.
ಪಟ್ಟಣದ ವಿವೇಕರಾಯ್ ಎಂಬಾತನೇ ಮೃತ ದುರ್ದೈವಿ. ವಿವೇಕ್ರಾಯ್ ಪತ್ನಿ ಶಿಲ್ಪಾ, ತನ್ನ ಗೆಳತಿ ಗಂಗಾ ಎಂಬುವಳೊಂದಿಗೆ ಸೇರಿ ವಿವೇಕರಾಯ್'ಗೆ ವಿಷ ಪ್ರಾಶನ ಮಾಡಿಸಿ ಕೊಲೆಗೈದಿದ್ದಾರೆ. ಇನ್ನು ಮೃತದೇಹವನ್ನು ಸ್ಮಶಾನಕ್ಕೆ ಸಾಗಿಸುವ ವೇಳೆ ಪೋಲಿಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದು, ಇದೀಗ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈ ಕುರಿತು ಮುಧೋಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.