
ಬೆಂಗಳೂರು(ಸೆ.14): ಸಂಸದ ಡಿ.ಕೆ.ಸುರೇಶ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದಾರೆ. ಡಿ.ಕೆ.ಸುರೇಶ್ ಕಿರುಕುಳ ನೀಡುತ್ತಿದ್ದಾರೆ ಅಂತ ಶಶಿಕಲಾ ಎನ್ನುವವರು ದೂರು ನೀಡಿದ್ದಾರೆ.
ಶಶಿಕಲಾ, ಕಳೆದ ಬಾರಿ ಕಾರ್ಪೊರೇಷನ್ ಚುನಾವಣೆಗೆ ಕಾಂಗ್ರೆಸ್'ನಿಂದ ಸ್ಪರ್ಧಿಸಿದ್ದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂಗೆ ಶಶಿಕಲಾ ದೂರು ನೀಡಿದ್ದರು. ತಮಗೆ ಸಂಸದ ಸುರೇಶ್ ಮಾನಸಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಇಡೀ ಕುಟುಂಬ ನೋವು ಅನುಭವಿಸುವಂತಾಗಿದೆ.
ಮೊನ್ನೆ ರಾಜರಾಜೇಶ್ವರಿ ನಗರದಲ್ಲಿ ಕಾವೇರಿ ಗಲಾಟೆ ವಿಚಾರವಾಗಿ ತಮ್ಮ ಪತಿ ಸೇರಿದಂತೆ ನಮ್ಮ ಮನೆಯವರನ್ನು ಬಂಧಿಸಿದ್ದಾರೆ. ಬಿಡುಗಡೆ ಮಾಡಿ ಅಂತ ಪೊಲೀಸರಿಗೆ ಮನವಿ ಮಾಡಿಕೊಂಡ್ರೆ ಡಿ.ಕೆ ಸುರೇಶ್ ಅವರಿಂದ ಹೇಳಿಸಿ ಅಂತ ಹೇಳ್ತಿದ್ದಾರೆ ಅಂತ ಸಿಎಂ ಎದುರು ಶಶಿಕಲಾ ಅಳಲು ತೋಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.