
ದಾವಣಗೆರೆ(ನ.28): ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಪ್ರತೀ ಮನೆಗಳಲ್ಲಿಯೂ ಕೂಡ ಶೌಚಾಲಯಗಳನ್ನು ನಿರ್ಮಾಣ ಮಾಡುವ ಮೂಲಕ ನೈರ್ಮಲ್ಯ ಕಾಯ್ದುಕೊಳ್ಳುವ ಯತ್ನ ನಡೆಯುತ್ತಿದೆ. ಇಲ್ಲೋರ್ವ ಯುವತಿ ಶೌಚಾಲಯ ನಿರ್ಮಾಣಕ್ಕಾಗಿ ಜೀವವನ್ನೇ ಕಳೆದುಕೊಂಡಿರುವ ಮನಕಲುಕುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶೌಚಾಲಯ ನಿರ್ಮಾಣ ಮಾಡಲು ಗ್ರಾಮಸ್ಥರು ಅವಕಾಶ ನೀಡಲಿಲ್ಲ ಎಂದು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಕಿಯಿಂದ ಸಂಪೂರ್ಣ ದೇಹವು ಸುಟ್ಟು ಕರಕಲಾಗಿದೆ. ಪೊಲೀಸರ ಸಮ್ಮುಖದಲ್ಲೇ ಯುವತಿ ಅನ್ನಪೂರ್ಣ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.