
ಹೊಸದಿಲ್ಲಿ: ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ಗೆ ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ಐದು ದಿನಗಳ ಕಾಲ ಪೆರೋಲ್ ಸಿಕ್ಕಿದೆ.
ಇತ್ತೀಚೆಗೆ ಅವರು ಅನಾರೋಗ್ಯದ ನೆಪ ಹೇಳಿ ರಾಂಚಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ದಿಲ್ಲಿಯ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಲಾಲು ಗುಣಮುಖರಾಗಿದ್ದಾರೆಂದು ವೈದ್ಯರು ಘೋಷಿಸಿದ ನಂತರ ಬಿಡುಗಡೆಯಾಗಿದ್ದರು.
ಕಳೆದ ಡಿಸೆಂಬರ್ನಲ್ಲಿ ಶಿಕ್ಷೆ ಪ್ರಕಟವಾದಾಗಿನಿಂದಲೂ ಮುಂಡಾ ಕೇಂದ್ರೀಯ ಕಾರಾಗೃಹದಲ್ಲಿರುವ ಲಾಲು, ರಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಿಹಾರ ಶಾಸಕರಾಗಿರುವ ಲಾಲು ಪುತ್ರ ತೇಜಸ್ವಿ ಯಾದವ್ ಅವರು ಮೇ 12ರಂದು ಆರ್ಜೆಡಿ ಶಾಸಕ ಚಂದ್ರಿಕ ರೈ ಪುತ್ರಿ ಐಶ್ವರ್ಯಾ ರೈ ಅವರನ್ನು ವರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಲಾಲು ಪಾಟ್ನಾಗೆ ಪ್ರಯಾಣಿಸಿದ್ದಾರೆ.
ಜಾರ್ಖಂಡ್ ಹೈ ಕೋರ್ಟ್ನಲ್ಲಿ ತಾತ್ಕಾಲಿಕ ಜಾಮೀನು ಕೋರಿ ಲಾಲು ಅರ್ಜಿ ಸಲ್ಲಿಸಿದ್ದರು. ಆದರೆ, ವಕೀಲರ ಪ್ರತಿಭಟನೆಯ ಕಾರಣ ಈ ಅರ್ಜಿ ವಿಚಾರಣೆಗೆ ಬಂದಿರಲಿಲ್ಲ. ನಂತರ ಪೆರೋಲ್ಗೆ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.