ದಾಂಪತ್ಯ ವಿರಸ : ಐಶ್ವರ್ಯಾ ರಾಯ್‌ಗೆ ವಿಚ್ಛೇದನಕ್ಕೆ ಅರ್ಜಿ

Published : Nov 03, 2018, 11:49 AM ISTUpdated : Nov 03, 2018, 12:07 PM IST
ದಾಂಪತ್ಯ ವಿರಸ : ಐಶ್ವರ್ಯಾ ರಾಯ್‌ಗೆ ವಿಚ್ಛೇದನಕ್ಕೆ ಅರ್ಜಿ

ಸಾರಾಂಶ

ಐಶ್ವರ್ಯ ರಾಯ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿವಾಹದಲ್ಲಿ ವಿರಸ ಎದುರಾಗಿದೆ ಎನ್ನಲಾಗಿದ್ದು ಆದರೆ ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. 

ಪಟನಾ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರ ಹಿರಿಯ ಪುತ್ರ ತೇಜ್‌ ಪ್ರತಾಪ್‌ ಯಾದವ್‌ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟ6 ತಿಂಗಳಲ್ಲೇ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 

ಇದೇ ವರ್ಷದ ಮೇ 12ರಂದು ತೇಜ್‌ ಪ್ರತಾಪ್‌ ಅವರು, ಆರ್‌ಜೆಡಿ ಮುಖಂಡ ಚಂದ್ರಿಕಾ ರೈ ಅವರ ಪುತ್ರಿ ಐಶ್ವರ್ಯ ರಾಯ್‌ ಅವರನ್ನು ವರಿಸಿದ್ದರು. ಆದರೆ, ಇದೀಗ ತೇಜ್‌ ಪ್ರತಾಪ್‌ ಪಟನಾ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಆದರೆ, ಈ ವಿಚ್ಛೇದನಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. 

ಬಿಹಾರದ ಮಾಜಿ ಸಿಎಂ ಆಗಿರುವ ದರೋಗಾ ಪ್ರಸಾದ್‌ ರೈ ಅವರ ಮೊಮ್ಮಗಳಾಗಿದ್ದ ಐಶ್ವರ್ಯ ರೈ ಅವರು, 2019ರ ಲೋಕಸಭಾ ಚುನಾವಣೆಯಲ್ಲಿ ಆರ್‌ಜೆಡಿ ಟಿಕೆಟ್‌ನಿಂದ ಕಣಕ್ಕಿಳಿಯುತ್ತಾರೆ ಎಂಬ ವರದಿಗಳ ಬೆನ್ನಲ್ಲೇ, ವಿಚ್ಛೇದನದ ಸುದ್ದಿ ಹೊರಬಿದ್ದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?