
ರಾಂಚಿ: ಬಹುಕೋಟಿ ಹಗರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಅನಾರೋಗ್ಯದಿಂದ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲು ಯಾದವ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಲಾಲು ಅವರ ಬಲಗಾಲಿನಲ್ಲಾದ ಗಾಯದಿಂದ ಹೊರಬರುತ್ತಿರುವ ಕೀವಿನಿಂದಾಗಿ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ರಿಮ್ಸ್ ವೈದ್ಯ ಡಾ. ಉಮೇಶ್ ಪ್ರಸಾದ್ ಹೇಳಿದ್ದಾರೆ. ‘ಇದ್ದಕ್ಕಿದ್ದಂತೆಯೇ ಲಾಲು ಅವರಲ್ಲಿ ದೇಹದಲ್ಲಿ ಸಕ್ಕರೆ ಅಂಶ ಮತ್ತು ರಕ್ತದ ಒತ್ತಡ ಹೆಚ್ಚಾಗಿದೆ.
ಹೀಗಾಗಿ ಅವರಿಗೆ ನೀಡುವ ಇನ್ಸುಲಿನ್ ಪ್ರಮಾಣ ಹೆಚ್ಚಿಸಲಾಗಿದೆ. ಬಲಗಾಲಿನ ಗಾಯದಿಂದ ಕೀವು ಸೋರುವಿಕೆ ಹೆಚ್ಚಾಗಿದ್ದು, ಅವರಿಗೆ ನಿಲ್ಲಲು ಮತ್ತು ಶೌಚಾಲಯಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ,’ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ