
ನವದೆಹಲಿ(ಜ.24): ಭಯೋತ್ಪಾದಕರ ವಿರುದ್ದದ ಎನ್ಕೌಂಟರ್ನಲ್ಲಿ ಹುತಾತ್ಮರಾಗಿದ್ದ ಲ್ಯಾನ್ಸ್ ನಾಯಕ್ ನಝೀರ್ ಅಹ್ಮದ್ ವಾನಿ ಅವರಿಗೆ, ಶಾಂತಿ ಸಮಯದಲ್ಲಿ ಭಾರತ ಸರ್ಕಾರ ನಿಡುವ ಅತ್ಯುನ್ನತ ಪ್ರಶಸ್ತಿ ಅಶೋಕ ಚಕ್ರ ಪುರಸ್ಕಾರ ಸಂದಿದೆ.
ಕಳೆದ ವರ್ಷ ನವೆಂಬರ್ನಲ್ಲಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಪ್ರದೇಶದ ಬತಗುಂದ್ ಗ್ರಾಮದಲ್ಲಿ, ಭಯೋತ್ಪಾದಕರೊಂದಿಗೆ ಹೋರಾಡುತ್ತಾ ಝೀರ್ ಅಹ್ಮದ್ ವಾನಿ ಹುತಾತ್ಮರಾಗಿದ್ದರು.
ಲ್ಯಾನ್ಸ್ ನಾಯಕ್ ನಝೀರ್ ಅಹ್ಮದ್ ವಾನಿ ಭಯೋತ್ಪಾದಕರೊಂದಿಗೆ ಹೋರಾಡುತ್ತಲೇ, ಗಾಯಾಳುಗಳಾಗಿದ್ದ ತಮ್ಮ ಸಹೋದ್ಯೋಗಿ ಸೈನಿಕರನ್ನು ಉಳಿಸಲು ಶ್ರಮವಹಿಸಿದ್ದರು. ಈ ಮೂಲಕ ತಮ್ಮ ಪ್ರಾಣವನ್ನೇ ಸಮರ್ಪಿಸಿ ಅತ್ಯುನ್ನತ ತ್ಯಾಗ ಮಾಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಅಧಿಸೂಚನೆಯಲ್ಲಿ ವಿವರಿಸಿದೆ.
ಈ ಹಿಂದೆ ಸ್ವತಃ ಉಗ್ರಗಾಮಿಯಾಗಿದ್ದ ಅಹ್ಮದ್ ವಾನಿ, ಶರಣಾಗತಿ ಬಳಿಕ ಸೈನ್ಯಕ್ಕೆ ಸೇರಿ ಎರಡು ಬಾರಿ ಸೇನಾ ಪದಕ ವಿಜೇತರಾಗಿದ್ದರು. ಕುಲ್ಗಮ್ ನ ಚೆಕಿ ಅಶ್ಮುಜೀ ಗ್ರಾಮದ ನಿವಾಸಿಯಾಗಿದ್ದ ವಾನಿ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.
ಅಂದು ಉಗ್ರ, ಇಂದು ಭಾರತಕ್ಕಾಗಿ ಬಲಿದಾನ: ಹೀಗೋರ್ವ ಸೈನಿಕನ ಕಥೆ!
ನೀವಲ್ಲ ಏಕಾಂಗಿ, ನಾನಿದ್ದೀನಿ ಮಗನಾಗಿ: ಹುತಾತ್ಮನ ತಂದೆಗೆ ಸೈನಿಕನ ಸಾಂತ್ವನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.