
ಬೆಂಗಳೂರು (ಏ.01): ಸಚಿವ ಕೃಷ್ಣ ಬೈರೇಗೌಡ ಹಾಗೂ ಬೆಂಬಲಿಗರ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಇಂತಹ ಗಂಭಿರ ಆರೋಪ ಮಾಡಿರೋದು ನಗರ ಬಿಜೆಪಿ ವಕ್ತಾರ ಹಾಗೂ ಮಾಜಿ ಕಾರ್ಪೊರೆಟರ್ ಎನ್.ಆರ್. ರಮೇಶ್. ಭೂಕಬಳಿಕೆ ಬಗ್ಗೆ ದಾಖಲೆಯನ್ನೂ ಸಹ ಬಿಡುಗಡೆ ಮಾಡಿದ್ದಾರೆ.
ಬ್ಯಾಟರಾಯನಪುರ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯ ವಾರ್ಡ ನಂ.11 ರಲ್ಲಿ ಬರುವ, ಸಿಂಗಾಪುರ ಗ್ರಾಮದ ಸರ್ವೆ ನಂ 109 ರಲ್ಲಿ, ಸುಮಾರು 1800 ಕೋಟಿಗೂ ಅಧಿಕ ಭೂಮಿ ಕಬಳಿಸಿದ್ದಾರೆ. ಅಷ್ಟೇ ಅಲ್ಲದೇ 2008 ರಿಂದ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಸುಮಾರು 5000 ಕೋಟಿ ಬೆಲೆ ಬಾಳುವ ಸರ್ಕಾರಿ ಭೂಮಿ ಕಬಳಿಸಿದ್ದಾರೆ. ಕಾನೂನು ಬಾಹಿರವಾಗಿ 15 ಮಂದಿ ಹೆಸರಿಗೆ ಎಂ.ಸಿ. ಮಾಡಿಸಿಕೊಂಡಿದ್ದಾರೆ. ಅಲ್ಲದೆ ಸಿಂಗಾಪುರ ಕೆರೆಯನ್ನು ಅಕ್ರಮ ಬಡಾವಣೆಯನ್ನಾಗಿ ನಿರ್ಮಿಸಲಾಗಿದೆ. ಸಚಿವ ಕೃಷ್ಣ ಭೈರೇಗೌಡರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಪಡಿಸಿದ್ದಾರೆ. ಕೃಷ್ಣ ಭೈರೇಗೌಡ ಸೇರಿದಂತೆ 15 ಮಂದಿ ವಿರುದ್ಧ ಬಿಎಂಟಿಎಫ್ ಮತ್ತು ಭೂಕಬಳಿಕೆ ನಿಗ್ರಹ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ದಾಖಲೆಗಳ ಸಮೇತ ರಾಜ್ಯಪಾಲರಿಗೂ ಸಹ ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.