ಜಲಪಾತ ಬಳಿ ಕುಸಿದ ಗುಡ್ಡ : ರೈಲು ಸಂಚಾರ ಸ್ಥಗಿತ

Published : Aug 22, 2018, 07:47 AM ISTUpdated : Sep 09, 2018, 09:51 PM IST
ಜಲಪಾತ ಬಳಿ ಕುಸಿದ ಗುಡ್ಡ : ರೈಲು ಸಂಚಾರ ಸ್ಥಗಿತ

ಸಾರಾಂಶ

ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರಿದಿದೆ. ಭಾರೀ ಮಳೆಯಿಂದ ದೂಧಸಾಗರ ಜಲಪಾತದ ಬಳಿಯಲ್ಲಿ ಭೂಮಿ ಕುಸಿದಿದ್ದು ರೈಲ್ವೆ ಸಂಚಾರವನ್ನು ಸ್ಥಗಿತ ಮಾಡಲಾಗಿದೆ. 

ಬೆಳಗಾವಿ: ಬೆಳಗಾವಿ ಮತ್ತು ಖಾನಾಪುರ ಅರಣ್ಯ ಪ್ರದೇಶಗಳಲ್ಲಿ ಮಳೆ ಅಬ್ಬರ ಮಂಗಳವಾರವೂ ಮುಂದುವರಿದಿದೆ. ಗೋವಾ ರಾಜ್ಯ ವ್ಯಾಪ್ತಿಯ ದೂಧಸಾಗರ ಜಲಪಾತದ ಬಳಿ ಮಂಗಳವಾರ ಗುಡ್ಡ ಕುಸಿದಿದ್ದು, ನಿಜಾಮುದ್ದೀನ್‌- ವಾಸ್ಕೋ ರೈಲು ಸಂಚಾರ ರದ್ದುಗೊಂಡಿದೆ. 

ಲೋಂಡಾ-ಬೆಳಗಾವಿ- ಮಿರಜ್‌ ರೈಲು ಹಳಿ ಮಾರ್ಗ 37/800ರಿಂದ 900 ಮೀಟರ್‌ ವ್ಯಾಪ್ತಿಯಲ್ಲಿ ಗುಡ್ಡ ಕುಸಿದಿದೆ. ಹೀಗಾಗಿ ನಿಜಾಮುದ್ದೀನ್‌ ಲಿಂಕ್‌ ಎಕ್ಸ್‌ಪ್ರೆಸ್‌ ಮತ್ತು ವಿಎಸ್‌ಜಿ- ಎಸ್‌ಬಿಸಿ ಎಕ್ಸ್‌ಪ್ರೆಸ್‌ ರೈಲುಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 

ಸುರಿಯುತ್ತಿರುವ ಮಳೆಯ ನಡುವೆಯೇ ಮಣ್ಣು ಮತ್ತು ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯ ನಡೆದಿದೆ. ಗೋವಾದಿಂದ ರೈಲು ಪ್ರಯಾಣಿಕರು ಬಸ್‌ಗಳ ಮೂಲಕ ಬೆಳಗಾವಿಗೆ ಆಗಮಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವ್ಯವಹಾರದ ಬಗ್ಗೆ ಮಾತನಾಡುತ್ತಿದ್ದಾಗಲೇ ಉದ್ಯಮಿಗೆ ಹಠಾತ್ ಹೃದಯಾಘಾತ: ಸಿಪಿಆರ್ ಮಾಡಿ ಜೀವ ಉಳಿಸಿದ ಯುವಕ
ಮಾಟ ಮಂತ್ರ ಪರಿಹಾರದ ನಾಟಕ: ಮಲ್ಲೇಶ್ವರಂನಲ್ಲಿ ಚಿನ್ನಾಭರಣ ದೋಚಿದ ನಕಲಿ ಸ್ವಾಮಿಗಳು!