
ನವದೆಹಲಿ: ಸೋಮವಾರ ದೇಶದ ವಿವಿಧೆಡೆ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಮತ್ತೊಮ್ಮೆ ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ) ಕುರಿತು ಭಾರಿ ಗದ್ದಲ ಉಂಟಾಗಿದೆ. ವಿವಿಧೆಡೆಗಳಲ್ಲಿ ಮತಯಂತ್ರಗಳಲ್ಲಿ ದೋಷಗಳು ಕಂಡು ಬಂದ ಹಿನ್ನೆಲೆಯಲ್ಲಿ, ಬಿಜೆಪಿಯೂ ಸೇರಿದಂತೆ ಪ್ರತಿಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಕೆಲವೆಡೆ ಮರುಮತದಾನಕ್ಕೆ ಒತ್ತಾಯಿಸಿವೆ.
ಕೈರಾನ ಲೋಕಸಭಾ ಕ್ಷೇತ್ರ ಮತ್ತು ನೂರ್ಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಇವಿಎಂಗಳು ಮತ್ತು ವಿವಿಪ್ಯಾಟ್ಗಳಲ್ಲೂ ದೋಷ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿಯೂ ಸೇರಿದಂತೆ ಪ್ರತಿಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿವೆ. ಆದರೆ, ಆರೋಪಗಳನ್ನು ನಿರಾಕರಿಸಿರುವ ಚುನಾವಣಾ ಆಯೋಗ ಈ ಕುರಿತ ವರದಿಗಳು ಉತ್ಪ್ರೇಕ್ಷೆಯಿಂದ ಕೂಡಿವೆ ಎಂದಿದೆ.
ತಾಪಮಾನ ಹೆಚ್ಚಾಗಿದ್ದುದರಿಂದ ಇವಿಎಂಗಳಲ್ಲಿ ದೋಷ ಕಂಡು ಬಂದಿರುವ ಸಾಧ್ಯತೆಯಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ. ಕೈರಾನ ಮತ್ತು ನೂರ್ಪುರದ 197 ಬೂತ್ಗಳಲ್ಲಿ ಇವಿಎಂಗಳಲ್ಲಿ ದೋಷವಿತ್ತು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ನಿಯೋಗವು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದೆ. ಮಹಾರಾಷ್ಟ್ರದ ಭಂಡಾರ-ಗೊಂಡಿಯಾ ಕ್ಷೇತ್ರದ 35 ಬೂತ್ಗಳಲ್ಲಿ ಇವಿಎಂ ದೋಷ ಕಂಡುಬಂದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.