
ರಾಯಚೂರು[ಏ. 01] ನ್ಯೂಜೆರ್ಸಿಯಲ್ಲಿ ಅನುಮಾಸ್ಪದವಾಗಿ ಮೃತಪಟ್ಟಿದ್ದ ಸಿಂಧನೂರಿನ ವೈದ್ಯರ ಅಂತಿಮ ವಿಧಿ ವಿಧಾನವನ್ನು ಸೋಮವಾರ ನೆರವೇರಿಸಲಾಯಿತು.
ಸಿಂಧನೂರು ತಾಲೂಕಿನ ಗಾಂಧಿನಗರದ ಮಣಿದೀಪ್ ನಂದಿಗಮ್ (28) ಮಾರ್ಚ್ 27 ರಂದು ಅನುಮಾಸ್ಪದವಾಗಿ ಮೃತಪಟ್ಟಿದ್ದರು. ಮೃತಪಟ್ಟು 6 ದಿನಗಳ ನಂತರ ತಾಯ್ನಾಡಿಗೆ ಅವರ ಪಾರ್ಥಿವ ಶರೀರ ತರಲಾಗಿತ್ತು.
ಭಾನುವಾರ ಸಂಜೆ ವಿಶೇಷ ವಿಮಾನದ ಮೂಲಕ ಹೈದರಾಬಾದ್ ತಲುಪಿದ್ದ ಮೃತ ದೇಹವನ್ನು ಇಂದು ಬೆಳಿಗ್ಗೆ ಸ್ವಗ್ರಾಮ ಗಾಂಧಿನಗರಕ್ಕೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸ್ವಗ್ರಾಮ ಗಂಧಿನಗರದಲ್ಲೆ ವಿಧಿ ವಿಧಾನಗಳ ಮೂಲಕ ಅಂತಿಮ ಕುಟುಂಬಸ್ಥರು ಅಂತಿಮ ವಿಧಿ ನೆರವೇರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.