ಸೌಧದಲ್ಲಿ ಜೆಡಿಎಸ್‌ ಬಾವುಟ ನನ್ನ ಕೊನೆ ಆಸೆ: ಗೌಡರ ಕಣ್ಣೀರು

Published : Jun 30, 2017, 11:12 AM ISTUpdated : Apr 11, 2018, 12:40 PM IST
ಸೌಧದಲ್ಲಿ ಜೆಡಿಎಸ್‌ ಬಾವುಟ ನನ್ನ ಕೊನೆ ಆಸೆ: ಗೌಡರ ಕಣ್ಣೀರು

ಸಾರಾಂಶ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರ ಚುಕ್ಕಾಣಿ ಹಿಡಿಯಲು ರಾಜ್ಯದ ಮತದಾರರು ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ನನ್ನ ಕೊನೆಯ ಆಸೆಯನ್ನು ಈಡೇರಿಸುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಕರೆ ನೀಡಿದರು.

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರ ಚುಕ್ಕಾಣಿ ಹಿಡಿಯಲು ರಾಜ್ಯದ ಮತದಾರರು ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ನನ್ನ ಕೊನೆಯ ಆಸೆಯನ್ನು ಈಡೇರಿಸುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಕರೆ ನೀಡಿದರು. ಜೆಡಿಎಸ್‌ ಸಮಾವೇಶದಲ್ಲಿ ಅವರು ಮಾತನಾಡಿ 2018ಕ್ಕೆ ವಿಧಾನಸೌಧದಲ್ಲಿ ಜೆಡಿಎಸ್‌ ಬಾವುಟ ಹಾರಿಸುವುದು ನನ್ನ ಕೊನೆಯ ಆಸೆಯಾಗಿದೆ ಎಂದು ಕಣ್ಣೀರು ಹಾಕುತ್ತಾ ಹೇಳಿದರು.

ದೇವೇಗೌಡ- ವಿಶ್ವನಾಥ್‌ ದಿಢೀರ್‌ ಭೇಟಿ:

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಕಾಂಗ್ರೆಸ್‌ ತೊರೆದಿರುವ ಮಾಜಿ ಸಂಸದ ಎಚ್‌. ವಿಶ್ವನಾಥ್‌ ಅವರು ಮೈಸೂರಿನಲ್ಲಿ ಗುರುವಾರ ಭೇಟಿಯಾಗಿದ್ದಾರೆ. ಮೈಸೂರಿನ ಹೊರವಲಯದ ಬೋಗಾದಿಯಲ್ಲಿರುವ ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌. ರಂಗಪ್ಪ ಅವರ ನಿವಾಸದಲ್ಲಿ ಈ ಇಬ್ಬರು ನಾಯಕರು ದಿಢೀರ್‌ ಚರ್ಚಿಸಿದ್ದಾರೆ. ಭೇಟಿಗೂ ಮುನ್ನ ಮಾತನಾಡಿದ ಗೌಡರು, ವಿಶ್ವನಾಥ್‌ ಷರತ್ತುರಹಿತರಾಗಿ ಬಂದಲ್ಲಿ ಸ್ವಾಗತಿಸುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌