
ಕಲಬುರಗಿ: ಮಾಜಿ ಸಚಿವ ದಿವಂಗತ ಸಿ. ಗುರುನಾಥ್ ಪುತ್ರ ರಘುನಾಥ್ ಮೇಲೆ ಸಂಬಂಧಿಕರಿಂದಲೇ ಮಾರಣಾಂತಿಕ ಹಲ್ಲೆ ನಡೆದಿದೆ. ಕಲಬುರಗಿಯ ಶಹಬಾದ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಕಬ್ಬಿಣದ ರಾಡ್’ನಿಂದ ಹಲ್ಲೆ ನಡೆಸಲಾಗಿದೆ.
ಸಂಬಂಧಿಕರಿಂದಲೇ ತಮ್ಮ ತಂದೆಯ ಹತ್ಯೆಯಾಗಿದೆ. ಅವರದ್ದು ಆತ್ಮಹತ್ಯೆಯಲ್ಲ ಎಂದು ರಘುನಾಥ್ ಫೇಸ್’ಬುಕ್’ನಲ್ಲಿ ಬರೆದುಕೊಂಡಿದ್ದರು. ಇದರಿಂದ ಆತ ಹಾಕಿದ್ದ ಪೋಸ್ಟ್ ಡಿಲೀಟ್ ಮಾಡುವಂತೆ ಎಚ್ಚರಿಕೆ ನೀಡಿದ್ದರು. ಆದರೆ ಸಂಬಂಧಿಗಳು ಹೇಳಿದ್ದ ಮಾತನ್ನು ಕೇಳದ ಹಿನ್ನೆಲೆಯಲ್ಲಿ ಮನಬಂದಂತೆ ಥಳಿಸಲಾಗಿದೆ.
ಈ ಸಂಬಂಧ ರಘುನಾಥ್, ಸತೀಶ್ ಹಾಗೂ ಅವಿನಾಶ್ ಅವರ ವಿರುದ್ಧ ದೂರು ನೀಡಿದ್ದಾರೆ. ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.