
ಸೂರತ್(ಜು.03): ಪ್ರಧಾನಿ ನರೇಂದ್ರ ಮೋದಿಯವರ ತವರಿನಲ್ಲೆ ನೂತನ GST ಕಾಯ್ದೆಗೆ ಭಾರೀ ವಿರೋಧ ವ್ಯಕ್ತವಾಗಿದೆ.
ಗುಜರಾತ್'ನ ಸೂರತ್ ಜವಳಿ ವ್ಯಾಪಾರಿಗಳ ಮೇಲೆ ಪೊಲೀಸರು ಇಂದು ಲಾಠೀಚಾರ್ಜ್ ನಡೆಸಿದ್ದಾರೆ. ಸೂರತ್ನಲ್ಲಿ GST ವಿರೋಧಿಸಿ, ಜವಳಿ ವ್ಯಾಪಾರಿಗಳು ಬೀದಿಗಿಳಿದಿದ್ದಾರೆ. ಸೂರತ್'ನ ಎಲ್ಲ ಬಟ್ಟೆ ಅಂಗಡಿಗಳಿಗೆ ಬೀಗ ಜಡಿದು, ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠೀಚಾರ್ಜ್ ನಡೆಸಿದ್ದಾರೆ. ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಒಂದು ದೇಶ ಒಂದು ತೆರಿಗೆ ಉದ್ದೇಶದಿಂದ ನೂತನ GST ಕಾಯ್ದೆ ಜಾರಿಗೆ ತಂದಿದ್ದರು. ಇದೀಗ ಈ ಕಾಯ್ದೆಗೆ ಪ್ರಧಾನಿ ತವರಲ್ಲೇ ವಿರೋಧ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.