ಎಂಇಎಸ್‌‍ ಕಾರ್ಯಕರ್ತರಿಗೆ ಲಾಠಿ ರುಚಿ

Published : Nov 01, 2016, 06:00 PM ISTUpdated : Apr 11, 2018, 01:12 PM IST
ಎಂಇಎಸ್‌‍ ಕಾರ್ಯಕರ್ತರಿಗೆ ಲಾಠಿ ರುಚಿ

ಸಾರಾಂಶ

ಮಹಾನಗರ ಪಾಲಿಕೆ ಮೇಯರ್‌ ಸರೀತಾ ಪಾಟೀಲ, ಉಪಮೇಯರ್‌ ಸಂಜಯ ಶಿಂಧೆ, ಶಾಸಕ ಸಂಭಾಜಿ ಪಾಟೀಲ ಸೇರಿದಂತೆ ಪಾಲಿಕೆಯ ಬಹುತೇಕ ಎಂಇಎಸ್ ಸದಸ್ಯರು ಭಾಗಿಯಾಗಿದ್ದರು

ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳೆಲ್ಲ ಸಂಭ್ರಮದಿಂದ  ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದರೆ, ಎಂಇಎಸ್ ತನ್ನ ತನ್ನ ಕ್ಯಾತೆ ತೆಗೆದಿದೆ. ಸಂಭಾಜಿ ಮೈದಾನದಲ್ಲಿ ಕಪ್ಪು ಭಾವುಟ ಪ್ರದರ್ಶಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡುವ ಮೂಲಕ ಕರಾಳ ದಿನವನ್ನ ಆಚರಿಸಿತು. ಮಹಾನಗರ ಪಾಲಿಕೆ ಮೇಯರ್‌ ಸರೀತಾ ಪಾಟೀಲ, ಉಪಮೇಯರ್‌ ಸಂಜಯ ಶಿಂಧೆ, ಶಾಸಕ ಸಂಭಾಜಿ ಪಾಟೀಲ ಸೇರಿದಂತೆ ಪಾಲಿಕೆಯ ಬಹುತೇಕ ಎಂಇಎಸ್ ಸದಸ್ಯರು ಭಾಗಿಯಾಗಿದ್ದರು. ಪ್ರಮುಖ ಬೀದಿಗಳಲ್ಲಿ ರ್ಯಾಲಿ ನಡೆಸಿದ ಎಂಇಎಸ್ ಕಾರ್ಯಕರ್ತರು, ರಾಜ್ಯೋತ್ಸವಕ್ಕೆ ಕಟ್ಟಲಾಗಿದ್ದ ಬಾವುಟ, ಬಂಟಿಂಗ್ ಕಿತ್ತೆಸೆಯುವ ಪ್ರಯತ್ನ ಮಾಡಿದರು. ಅಲ್ಲದೆ ಕಲ್ಲು ತೂರಾಟ ನಡೆಸಿದರು. ತಕ್ಷಣವೇ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ