ಫೀ ಪಡೆಯದೇ ಸೈನಿಕರ ವಕೀಲಿಕೆ ಮಾಡಿ: ಜಡ್ಜ್

Published : Feb 15, 2019, 05:18 PM IST
ಫೀ ಪಡೆಯದೇ ಸೈನಿಕರ ವಕೀಲಿಕೆ ಮಾಡಿ: ಜಡ್ಜ್

ಸಾರಾಂಶ

ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಗೆ ಎಲ್ಲೆಡೆಯಿಂದ ಖಂಡನೆ ವ್ಯಕ್ತವಾಗುತ್ತಿದೆ. ಹುತಾತ್ಮ ಯೋಧರ ಕುಟುಂಬದ ಪರವಾಗಿ ಬೆಂಬಲ ವ್ಯಕ್ತವಾಗುತ್ತಿದೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ವಕೀಲರೂ ಈ ಘೋರ ಕೃತ್ಯವನ್ನು ಖಂಡಿಸಿ, ಸಿಆರ್‌ಪಿಎಫ್ ಪಡೆಯ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಬೆಂಗಳೂರು (ಫೆ. 15): ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಗೆ ಎಲ್ಲೆಡೆಯಿಂದ ಖಂಡನೆ ವ್ಯಕ್ತವಾಗುತ್ತಿದೆ. ಹುತಾತ್ಮ ಸೈನಿಕರ ಕುಟುಂಬಕ್ಕೆ ಸಾಂತ್ವನ ಹೇಳಲಾಗುತ್ತಿದೆ. ಶಾಲಾ-ಕಾಲೇಜು, ಕಚೇರಿ, ಕೋರ್ಟ್‌ಗಳಲ್ಲಿಯೂ ದೇಶಕ್ಕಾಗಿ ಬಲಿದಾನ ಮಾಡಿದವರನ್ನು ನಮಿಸಲಾಗುತ್ತಿದೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ವಕೀಲರೂ ಈ ಘೋರ ಕೃತ್ಯವನ್ನು ಖಂಡಿಸಿ, ಸಿಆರ್‌ಪಿಎಫ್ ಪಡೆಯ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಅವರು ಮಾತನಾಡಿ, ಉಗ್ರರ ದಾಳಿ ಖಂಡನಾರ್ಹ.  ಸೈನಿಕರು ಮತ್ತವರ ಕುಟುಂಬದ ಜೊತೆಗೆ ಇಡೀ ದೇಶ ನಿಲ್ಲಬೇಕಿದೆ.‌  ಸೈನಿಕರು ಹಾಗೂ ಮಾಜಿ‌ ಸೈನಿಕರು ನ್ಯಾಯಾಲಯಕ್ಕೆ ಸಲ್ಲಿಸುವ ಅರ್ಜಿಯನ್ನು ನ್ಯಾಯಾಧೀಶರು ಮೊದಲ‌ ಆದ್ಯತೆ ಮೇರೆಗೆ ವಿಚಾರಣೆ ನಡೆಸಿ ತ್ವರಿತವಾಗಿ ಇತ್ಯರ್ಥಪಡಿಸಬೇಕು. ವಕೀಲರೂ ಸೈನಿಕರಿಂದ ಶುಲ್ಕ ಪಡೆಯದೆ ಉಚಿತವಾಗಿ ವಕಾಲತ್ತು ವಹಿಸಿ, ಅವರ ಪರ ವಾದ ಮಂಡಿಸಬೇಕು.‌ ಅದುವೇ ನಾವು ಯೋಧರಿಗೆ ಸಲ್ಲಿಸುವ ಅತಿದೊಡ್ಡ ಸೇವೆ ಎಂದರು. 

ಯೋಧರ ಹತ್ಯೆ ಕೃತ್ಯ ಅತ್ಯಂತ ಖಂಡನೀಯ. ದೇಶದ ಹೊರಗಿನವರಾಗಲಿ ಅಥವಾ ಒಳಗಿನವರಾಗಲಿ ಇಂಥ ಕೃತ್ಯವನ್ನು ಖಂಡಿಸಬೇಕು. ಜವಾನರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರೆ, ನ್ಯಾಯಾಧೀಶರು ಅದನ್ನು ಆದ್ಯತೆ ಮೇರೆಗೆ ವಿಚಾರಣೆ ನಡೆಸಿ, ಇತ್ಯರ್ಥ ಮಾಡಬೇಕು ಎಂದು ಆಗ್ರಹಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು